ಎಸ್.ವೈ.ಎಸ್ ರಾಜ್ಯ ಸಮಿತಿ ನಿರ್ದೇಶನದಂತೆ ದ.ಕ ವೆಸ್ಟ್ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ, ಝೋನ್ ಪದಾಧಿಕಾರಿಗಳು ಹಾಗೂ ಸರ್ಕಲ್ ಸಮಿತಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಯುನಿಟ್ ಗಳ ಆಯ್ದ ನಾಲ್ಕು ಮಂದಿ ನಾಯಕರ ಸಂಗಮವು ಮಾರ್ಚ್ ಹತ್ತು ಆದಿತ್ಯವಾರ ಅಡ್ಯಾರ್ ಕಣ್ಣೂರು ಅಲ್ ಮರ್ಕಝುಲ್ ಇಸ್ಲಾಮಿ ನಲ್ಲಿ ಮಧ್ಯಾಹ್ನ 2 ಕ್ಕೆ ನಡೆಯಲಿದೆ.
ಜಿಲ್ಲಾ ಸಮಿತಿ ಅಧ್ಯಕ್ಷ ವಿ.ಯು ಇಸ್ಹಾಖ್ ಝುಹ್ರಿ ಕಾನಕೆರೆ ರವರ ಅಧ್ಯಕ್ಷತೆಯಲ್ಲಿ ನಿರ್ವಹಣಾ ಸಮಿತಿ ಕನ್ವೀನರ್ ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಾಂಘಿಕ ಕಾರ್ಯಾಚರಣೆಯ ವಿವಿಧ ವ್ಯವಸ್ಥೆಗಳ ಬಗ್ಗೆ ಜಿಲ್ಲಾ ನಾಯಕರಾದ ಬಷೀರ್ ಮದನಿ ಅಲ್ ಕಾಮಿಲ್ ಕೂಳೂರು, ಪ್ರಿಂಟೆಕ್ ಅಬ್ದುರ್ರಹ್ಮಾನ್ ಹಾಜಿ ಕೃಷ್ಣಾಪುರ, ಬದ್ರುದ್ದೀನ್ ಸಖಾಫಿ ಅಲ್ ಅಝ್ಹರಿ ಕೈಕಂಬ, ಹಾಫಿಳ್ ಯಅಕೂಬ್ ಸಅದಿ ನಾವೂರು ಮಾತನಾಡುವರು.
ಸಮಾರಂಭದಲ್ಲಿ ನಮ್ಮಿಂದ ಅಗಲಿದ ರಾಜ್ಯ ಸುನ್ನೀ ಉಲಮಾ ಒಕ್ಕೂಟದ ನಾಯಕ ಮರ್ಹೂಂ ಕೆ.ಎಂ ಇಸ್ಮಾಈಲ್ ಮುಸ್ಲಿಯಾರ್ ಮಿತ್ತೂರು ಕಂಕನಾಡಿ ಉಸ್ತಾದ್ ರವರ ಹೆಸರಿನಲ್ಲಿ ತಹ್ಲೀಲ್ ಮಜ್ಲಿಸ್ ನಡೆಯಲಿದೆ, ಜಿಲ್ಲಾ ಸಮಿತಿ ಅಧೀನದ ವಿವಿಧ ಘಟಕಗಳ ಸರಿ ಸುಮಾರು ಐನೂರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ