ಅಬುಧಾಬಿ: ಸಂಯುಕ್ತ ಅರಬ್ ಗಣರಾಜ್ಯ (ಯುಎಇ)ದ ಅಬುಧಾಬಿ ಸೇರಿದಂತೆ ಹಲವು ಭಾಗಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಇಡೀ ದೇಶವೇ ಹೈ ಅಲರ್ಟ್ ಆಗಿದೆ. ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದಂತೆ ಸರಕಾರ ಆದೇಶ ಹೊರಡಿಸಿದೆ.
ಯುಎಇಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜನರಿಗೆ ಮುನ್ನೆಚ್ಚರಿಕೆಯನ್ನೂ ನೀಡಿದೆ. ಹಲವೆಡೆ ಹಠಾತ್ ಮಳೆ ಮತ್ತು ಅದರಿಂದಾಗಿ ಪ್ರವಾಹ ಕೂಡ ಉಂಟಾಗಬಹುದು ಎಂದು ಸೂಚನೆ ನೀಡಿದೆ.
ಅಬುಧಾಬಿಯ ಅಲ್ ದಫ್ರಾ ಮತ್ತು ಅಲ್ ಐನ್ ನಲ್ಲಿ ಭಾರೀ ಮಳೆ ಆರಂಭವಾಗಿದೆ. ಮುನ್ನೆಚ್ಚರಿಕೆಯಾಗಿ ಶಾರ್ಜಾದಲ್ಲಿ ಉದ್ಯಾನವನಗಳನ್ನು ಮುಚ್ಚಲಾಗಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಕಾರ್ಮಿಕ ಸಚಿವಾಲಯ ನಿರ್ದೇಶನ ನೀಡಿದೆ. ದೇಶದ ಮಸೀದಿಗಳಲ್ಲಿ, ಜುಮಾ ಪ್ರಾರ್ಥನೆಯ ನಂತರ, ಅಸ್ಥಿರ ವಾತಾವರಣದ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿದೆ.
ಯುಎಇ ವಿಪತ್ತು ನಿರ್ವಹಣಾ ಸಮಿತಿಯ ಮುನ್ನೆಚ್ಚರಿಕೆ ಶಿಫಾರಸುಗಳು
- ಭಾರೀ ಮಳೆಯಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ
- ಮಕ್ಕಳನ್ನು ಹೊರಗೆ ಆಟವಾಡಲು ಬಿಡಬೇಡಿ
- ನೀರು ನಿಲ್ಲುವ ಪ್ರದೇಶಗಳಿಂದ ದೂರವಿರಿ
- ನೀರು ಮೇಲೇರುವ ಸ್ಥಳದಿಂದ ದೂರ ಸರಿಯಿರಿ
- ಪರ್ವತಗಳಿಂದ ಹರಿಯುವ ನೀರಿನ್ನು ದಾಟಬೇಡಿ
- ಅರ್ಧ ಮುಳುಗಿದ ರಸ್ತೆಗಳನ್ನು ದಾಟಬೇಡಿ
- ವಾದಿಗಳು ಮತ್ತು ಅಣೆಕಟ್ಟುಗಳಿಗೆ ಪ್ರಯಾಣಿಸಬೇಡಿ
- ಹೊಳೆಗಳು ಮತ್ತು ನದಿಗಳಂತಹ ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳನ್ನು ತಪ್ಪಿಸಿ
- ಗಾಳಿ ಜೋರಾಗಿದ್ದರೆ ಹೊರಗೆ ಹೋಗಬೇಡಿ
- ಮನೆಯ ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ
- ಮರಗಳು, ಜಾಹೀರಾತು ಫಲಕಗಳು ಮತ್ತು ಬೀಳಲು ಸಾಧ್ಯತೆ ಇರುವ ವಸ್ತುಗಳಿಂದ ದೂರವಿರಿ
- ಆಲಿಕಲ್ಲು ಮಳೆಯ ಸಂದರ್ಭದಲ್ಲಿ ವಾಹನಗಳನ್ನು ಸುರಕ್ಷಿತವಾಗಿ ಮುಚ್ಚಿ
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು