janadhvani

Kannada Online News Paper

ಚಂದ್ರ ದರ್ಶನ : ನಾಳೆಯಿಂದ ರಾಜ್ಯಾದ್ಯಂತ ರಮಳಾನ್ ವೃತ ಆರಂಭ

ಮಂಗಳೂರು: ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವುದರಿಂದ ಮಂಗಳವಾರದಿಂದ ರಾಜ್ಯಾದ್ಯಂತ ಉಪವಾಸ ಪ್ರಾರಂಭವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಗಳಾದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್ ಬುಖಾರಿ ಮತ್ತು ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಹಾಗೂ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಚಂದ್ರ ದರ್ಶನವನ್ನು ದೃಢೀಕರಿಸಿ, ಮಾ.12 ರಮಳಾನ್ ಮೊದಲನೇ ದಿನ ಆಗಿರಲಿದೆ ಎಂದು ಘೋಷಿಸಿದ್ದಾರೆ.