ಕಿನ್ಯಾ: ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ಕಿನ್ಯ ಅಧೀನದ ಕೂಡಾರದಲ್ಲಿ ನಿರ್ಮಾಣವಾದ ಮದ್ರಸ ಕಟ್ಟಡದಲ್ಲಿ ಪವಿತ್ರ ರಮಳಾನ್ ಪ್ರಯುಕ್ತ ಪರಿಸರದ ವಿಶ್ವಾಸಿಗಳಿಗೆ ಆರಾಧನೆಯ ಅಗತ್ಯವನ್ನು ಪರಿಗಣಿಸಿ ನಮಾಝನ್ನು ಆರಂಭಿಸಲಾಯಿತು.

ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ನಿರ್ದೇಶಕರಾದ ಸಯ್ಯಿದ್ ಜಲಾಲುದ್ದೀನ್ ಸಅದಿ ಅಲ್ ಬುಖಾರಿ ತಂಙಳ್ ಮಳ್ಹರ್ ಸಾಮೂಹಿಕ (ಜಮಾಅತ್) ನಮಾಝಿಗೆ ನೇತೃತ್ವ ನೀಡಿದರು. ಸೆಂಟರ್ ಅಧ್ಯಕ್ಷ ಅಶ್ಅರಿಯ್ಯಾ ಮುಹಮ್ಮದ್ ಅಲಿ ಸಖಾಫಿ ಸದ್ರಿ ಸ್ಥಳದಲ್ಲಿ ನಿರ್ಮಾಣವಾದ ಮದ್ರಸ ಹಾಗೂ ನೂತನವಾಗಿ ಪ್ರಾರಂಭಿಸಿದ ನಮಾಝಿನ ಪ್ರಾಮುಖ್ಯತೆಯನ್ನು ವಿವರಿಸಿ ಮಾತನಾಡಿದರು.

ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ಕೋಶಾಧಿಕಾರಿ, ಅಶ್ರಫ್ ಸಖಾಫಿ, ಸೆಂಟರ್ ನಾಯಕರಾದ ಕೆ.ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಬುಖಾರಿ ಜುಮುಅ ಮಸ್ಜಿದ್ ಖತೀಬ್ ಅಬೂಬಕರ್ ಸಿದ್ದೀಕ್ ಫಾಳಿಲಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಸಲ್ಲಿಸಿ ಮಾತನಾಡಿದರು. ಸಯ್ಯಿದ್ ಪಝಲ್ ಅಲ್ ಬುಖಾರಿ ತಂಙಳ್, ಮದ್ರಸ ನಿರ್ಮಾಣ ಸಮಿತಿ ಅಧ್ಯಕ್ಷ ಎಲಿಮಲೆ ಅಬ್ಬಾಸ್ ಹಾಜಿ, ಸೆಂಟರ್ ನಾಯಕರಾದ ಇಝ್ಝುದ್ದೀನ್ ಅಹ್ಸನಿ, ವಿ.ಎ ಮುಹಮ್ಮದ್ ಮುಸ್ಲಿಯಾರ್, ಬುಖಾರಿ ಜುಮುಅ ಮಸ್ಜಿದ್ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಹಾಜಿ ನಾಟೆಕಲ್,ಉಪಾಧ್ಯಕ್ಷ ಕೆ.ಎಚ್ ಮೂಸಕುಂಞಿ, ಅಬ್ದುಲ್ ಹಮೀದ್ ಟಿಂಬರ್, ಕಾರ್ಯದರ್ಶಿ ಅಬ್ದುಸ್ಸತ್ತಾರ್ ಮೀಂಪ್ರಿ,ಎಸ್ಸೆಸ್ಸೆಫ್ ಕಿನ್ಯ ಸೆಕ್ಟರ್ ಅಧ್ಯಕ್ಷ ಇರ್ಫಾನ್ ಸಖಾಫಿ ಖುತುಬಿನಗರ,ಸಿದ್ದೀಖ್ ಕನ್ನಂಗಾರ್, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮುಂತಾದವರು ಉಪಸ್ಥಿತರಿದ್ದರು,ಸಯ್ಯಿದ್ ಅಲವಿ ತಂಙಳ್ ಕಾರ್ಯಕ್ರಮದ ಪ್ರಾರಂಭದಲ್ಲಿ ದುಆ ಮೂಲಕ ಚಾಲನೆ ನೀಡಿದರು,ಬುಖಾರಿ ಎಜುಕೇಶನಲ್ & ಚಾರಿಟಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಕೆ.ಎಚ್ ಇಸ್ಮಾಈಲ್ ಸಅದಿ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್