ರಾಷ್ಟ್ರದಲ್ಲಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ಭಾವನೆಗಳ ಮೂಲಕ ಅಧಿಕಾರವನ್ನು ಪಡೆಯುವ ತಂತ್ರದ ಮುಂದುವರಿದ ಕ್ರಮವಾಗಿದೆ ಸಿಎಎ ಜಾರಿಗೊಳಿಸುವ ಆದೇಶ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿಪ್ರಾಯ ಪಟ್ಟಿದೆ.
ಸಿಎಎ ಜಾರಿಯ ಮೂಲಕ ಸರ್ಕಾರ ಈಗ ಎದುರಿಸುತ್ತಿರುವ ಬಿಕ್ಕಟ್ಟು ಹಾಗೂ ಅವಮಾನದ ಸಂಗತಿಗಳಿಂದ ಪ್ರಜೆಗಳ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ.
ಇದರ ಜಾರಿಯಿಂದ ಭಾರತವು, ಪ್ರಜಾಪ್ರಭುತ್ವ, ಜಾತ್ಯಾತೀತ ವ್ಯವಸ್ಥೆ ಹೊಂದಿರುವ ವಿಶ್ವದ ಅತೀ ದೊಡ್ಡ ರಾಷ್ಟ್ರವಾಗಿರುವುದರಿಂದ ವಿಶ್ವದ ಇತರ ರಾಷ್ಟ್ರಗಳ ನಡುವೆ ತಲೆ ತಗ್ಗಿಸುವ ಮಟ್ಟಕ್ಕೆ ಇಳಿಯ ಬೇಕಾಗುತ್ತದೆ.
ಸರಕಾರವು ತನ್ನ ಅಧಿಕಾರದ ಸರಣಿಯನ್ನು ಮುಂದುವರಿಸುವ ಸಲುವಾಗಿ ಚುನಾವಣೆಯ ಹೊಸ್ತಿಲಲ್ಲಿ ತರಾತುರಿಯಲ್ಲಿ ಸಿಎಎ ಜಾರಿಗೊಳಿಸುವ ಪ್ರಯತ್ನಪಡುತ್ತಿದ್ದು, ಇದು ಅಪಾಯಕಾರಿ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಅಧ್ಯಕ್ಷರಾದ ಮೌಲಾನ ಮುಹಮ್ಮದ್ ಫಾಝಿಲ್ ರಝ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಅಬೂಸುಫ್ಯಾನ್ ಇಬ್ರಾಹಿಂ ಮದನಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ