ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಬೃಹತ್ ಇಫ್ತಾರ್ ಕಾರ್ಯಕ್ರಮವು ದಿನಾಂಕ 15-03-2024 ರಂದು ದೋಹಾ ಮೋಡರ್ನ್ ಇಂಡಿಯನ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು


ಇಫ್ತಾರ್ ಸ್ವಾಗತ ಸಮಿತಿ ಚೇರ್ಮಾನ್ ಕಬೀರ್ ಮಡಿಕೇರಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮಕ್ಕೆ, ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ ಸ್ವಾಗತ ಕೋರಿದರು.
ಇಫ್ತಾರ್ ಕೂಟದ ಸಲುವಾಗಿ ಅಸರ್ ನಮಾಝಿನ ನಂತರ ಮಹಿಳೆಯರಿಗಾಗಿ ಪ್ರತ್ಯೇಕ ತರಗತಿಯೊಂದನ್ನು, ಖತ್ತರ್ ಪ್ರವಾಸದಲ್ಲಿರುವ ಅಲ್’ಅನ್ಸಾರ್ ಪತ್ರಿಕೆಯ ವ್ಯವಸ್ಥಾಪಕರಾದ
ಜಿ.ಎಂ. ಕಾಮಿಲ್ ಸಖಾಫಿಯವರು ನಡೆಸಿಕೊಟ್ಟರು.
ವೇದಿಕೆಯಲ್ಲಿ ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗ ಕಾರ್ಯದರ್ಶಿ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ ಎಮ್ಮೆಮ್ಮಾಡು, ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಹನೀಫ್ ಪಾತೂರು, ಅಂತರಾಷ್ಟ್ರೀಯ ಸಮಿತಿ ಅಡ್ಮಿನ್ ವಿಭಾಗ ಅಧ್ಯಕ್ಷರಾದ ಹಾಜಿ ಕಬೀರ್ ದೇರಳಕಟ್ಟೆ, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸದಸ್ಯರಾದ ಯೂಸುಫ್ ಸಖಾಫಿ ಅಯ್ಯಂಗೇರಿ, ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಖಾಲಿದ್ ಹಿಮಮಿ, ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಖತ್ತರ್ ಸಮಿತಿ ಅಧ್ಯಕ್ಷರಾದ ಅಬ್ದುಲ್ಲಾ ಉಙ್ಞಿ ಉಚ್ಚಿಲ ರವರು ಉಪಸ್ಥಿತರಿದ್ದರು.
ದುಆ ಹಾಗೂ ಸ್ವಲಾತ್ ಮಜ್ಲಿಸ್ ನೊಂದಿಗೆ ಆರಂಭವಾದ ಇಫ್ತಾರ್ ಸಂಗಮದಲ್ಲಿ ಸಹಸ್ರಾರು ಸಂಖೈಯ ಸದಸ್ಯರು ಹಾಗೂ ಹಿತೈಷಿಗಳು ಭಾಗವಹಿಸಿದ್ದರು. ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ನಾಯಕರಾದ ಸಿದ್ದೀಖ್ ಕೃಷ್ಣಾಪುರ, ಸಿದ್ದೀಖ್ ಹಂಡುಗೂಳಿಯವರ ನಾಯಕತ್ವದ ಐ-ಟೀಮ್ ಸ್ವಯಂಸೇವಕ ತಂಡ ಹಾಗೂ ಹಸನ್ ಪೂಂಜಾಲಕಟ್ಟೆ, ಅಶ್ರಫ್ ಕಾವಳ್’ಕಟ್ಟೆ ರವರ ನೇತೃತ್ವದ ಪುಡ್ ಟೀಮ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಇಫ್ತಾರ್ ಸ್ವಾಗತ ಸಮಿತಿ ಕನ್ವೀನರ್ ಸಾದಿಕ್ ಮೂಳೂರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ