ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಬೃಹತ್ ಇಫ್ತಾರ್ ಕಾರ್ಯಕ್ರಮವು ದಿನಾಂಕ 15-03-2024 ರಂದು ದೋಹಾ ಮೋಡರ್ನ್ ಇಂಡಿಯನ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು


ಇಫ್ತಾರ್ ಸ್ವಾಗತ ಸಮಿತಿ ಚೇರ್ಮಾನ್ ಕಬೀರ್ ಮಡಿಕೇರಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮಕ್ಕೆ, ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ ಸ್ವಾಗತ ಕೋರಿದರು.
ಇಫ್ತಾರ್ ಕೂಟದ ಸಲುವಾಗಿ ಅಸರ್ ನಮಾಝಿನ ನಂತರ ಮಹಿಳೆಯರಿಗಾಗಿ ಪ್ರತ್ಯೇಕ ತರಗತಿಯೊಂದನ್ನು, ಖತ್ತರ್ ಪ್ರವಾಸದಲ್ಲಿರುವ ಅಲ್’ಅನ್ಸಾರ್ ಪತ್ರಿಕೆಯ ವ್ಯವಸ್ಥಾಪಕರಾದ
ಜಿ.ಎಂ. ಕಾಮಿಲ್ ಸಖಾಫಿಯವರು ನಡೆಸಿಕೊಟ್ಟರು.
ವೇದಿಕೆಯಲ್ಲಿ ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗ ಕಾರ್ಯದರ್ಶಿ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ ಎಮ್ಮೆಮ್ಮಾಡು, ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಹನೀಫ್ ಪಾತೂರು, ಅಂತರಾಷ್ಟ್ರೀಯ ಸಮಿತಿ ಅಡ್ಮಿನ್ ವಿಭಾಗ ಅಧ್ಯಕ್ಷರಾದ ಹಾಜಿ ಕಬೀರ್ ದೇರಳಕಟ್ಟೆ, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸದಸ್ಯರಾದ ಯೂಸುಫ್ ಸಖಾಫಿ ಅಯ್ಯಂಗೇರಿ, ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಖಾಲಿದ್ ಹಿಮಮಿ, ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಖತ್ತರ್ ಸಮಿತಿ ಅಧ್ಯಕ್ಷರಾದ ಅಬ್ದುಲ್ಲಾ ಉಙ್ಞಿ ಉಚ್ಚಿಲ ರವರು ಉಪಸ್ಥಿತರಿದ್ದರು.
ದುಆ ಹಾಗೂ ಸ್ವಲಾತ್ ಮಜ್ಲಿಸ್ ನೊಂದಿಗೆ ಆರಂಭವಾದ ಇಫ್ತಾರ್ ಸಂಗಮದಲ್ಲಿ ಸಹಸ್ರಾರು ಸಂಖೈಯ ಸದಸ್ಯರು ಹಾಗೂ ಹಿತೈಷಿಗಳು ಭಾಗವಹಿಸಿದ್ದರು. ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ನಾಯಕರಾದ ಸಿದ್ದೀಖ್ ಕೃಷ್ಣಾಪುರ, ಸಿದ್ದೀಖ್ ಹಂಡುಗೂಳಿಯವರ ನಾಯಕತ್ವದ ಐ-ಟೀಮ್ ಸ್ವಯಂಸೇವಕ ತಂಡ ಹಾಗೂ ಹಸನ್ ಪೂಂಜಾಲಕಟ್ಟೆ, ಅಶ್ರಫ್ ಕಾವಳ್’ಕಟ್ಟೆ ರವರ ನೇತೃತ್ವದ ಪುಡ್ ಟೀಮ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಇಫ್ತಾರ್ ಸ್ವಾಗತ ಸಮಿತಿ ಕನ್ವೀನರ್ ಸಾದಿಕ್ ಮೂಳೂರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ