ಉಜಿರೆ ಮಾರ್ಚ್ 20 : ಉಜಿರೆ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ನಫೀಸತ್ ಪಿ. ಚಾರ್ಮಾಡಿ, ಸಹಾಯಕ ಪ್ರಾಧ್ಯಾಪಕಿ ಡಾ. ಶಶಿಪ್ರಭಾ ಅವರ ಸಂಶೋಧನೆಗೆ ಪ್ರತಿಷ್ಠಿತ ಅಮೇರಿಕನ್ ಪೇಟೆಂಟ್ ಲಭಿಸಿದೆ. ಪ್ರಪ್ರಥಮ ಬಾರಿಗೆ ಎಸ್. ಡಿ ಎಮ್. ಕಾಲೇಜು ಅಮೇರಿಕನ್ ಪೇಟೆಂಟ್ ಮನ್ನಣೆ ಪಡೆದ ಹೆಗ್ಗಳಿಕೆಗೆ ಭಾಜನವಾಗಿದೆ.
ಈ ಹಿಂದೆ ಇದೇ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿದ್ದ ಡಾ. ನಾರಾಯಣ ಹೆಬ್ಬಾರ್ ಅವರ ಸಂಶೋಧನೆಗೆ ಆಸ್ಟ್ರೇಲಿಯಾದ ಪೇಟೆಂಟ್ ಲಭಿಸಿತ್ತು. ಇದೀಗ ಈ ವಿಭಾಗದ ಇನ್ನಿಬ್ಬರು ಪ್ರಾಧ್ಯಾಪಕರು ನಡೆಸಿದ ಸಂಶೋಧನೆಯು ಅಮೇರಿಕನ್ ಪೇಟೆಂಟ್ ಪಡೆಯುವುದರ ಮೂಲಕ ಮತ್ತೊಂದು ವಿಶ್ವ ಮನ್ನಣೆ ಪಡೆದಂತಾಗಿದೆ. ಉಳಿದೆಲ್ಲ ದೇಶಗಳ ಪೇಟೆಂಟ್ ಗಿಂತ ಅಮೇರಿಕನ್ ಪೇಟೆಂಟ್ ಗೆ ವಿಶ್ವ ಮಾನ್ಯತೆ ಇದೆ. ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರದ ಪ್ರಯೋಗಾಲಯ ದಲ್ಲಿಯೇ ಈ ಇಬ್ಬರು ಪ್ರಾಧ್ಯಾಪಕರು ಸಂಶೋಧನೆ ಕೈಗೊಂಡು ಯಶಸ್ವಿಯಾಗಿದ್ದಾರೆ.
“ಬೆಂಝಿಲಿಡೀನ್ ಡಿರೈವಿಟೀಸ್ ಆಫ್ ಫಿನೋಬಾಮ್ ಆಸ್ ಆಂಟಿ-ಇನ್ಪ್ಲಮೇಟರಿ ಏಜೆಂಟ್ ” ಎಂಬ ವಿಷಯದ ಮೇಲೆ ಈ ಸಂಶೋಧನೆಯನ್ನು ಕೈಗೊಳ್ಳಲಾಗಿತ್ತು. ದೈಹಿಕ ನೋವು ನಿವಾರಕ ಔಷಧೀಯ ಪ್ರಯೋಜನಗಳನ್ನು ವಿಸ್ತರಿಸುವುದಕ್ಕೆ ಬೇಕಾದ ಪ್ರಾಯೋಗಿಕ ಮಾರ್ಗದರ್ಶಿ ಪರಿಕಲ್ಪನೆಯಾಗಿ ಈ ಸಂಶೋಧನೆಗೆ ಮಹತ್ವವಿದೆ. ವೈದ್ಯಕೀಯ ರಂಗದ ಚಿಕಿತ್ಸೆಯ ವಿಧಾನಗಳನ್ನು ಮರು ರೂಪಿಸುವುದಕ್ಕೆ ಪ್ರಸಕ್ತ ಸಂಶೋಧನೆಯ ಫಲಿತಗಳು ಪ್ರಯೋಜನ ಕಾರಿಯಾಗಲಿದೆ. ಇದನ್ನು ಪರಿಗಣಿಸಿ ಅಮೆರಿಕದ ಪ್ರತಿಷ್ಟಿತ ಪೇಟೆಂಟ್ನ ಮನ್ನಣೆ ನೀಡಲಾಗಿದೆ.
ಸೌದಿ ಅರೇಬಿಯಾದ ಕಿಂಗ್ ಫೈಸಲ್ ವಿಶ್ವ ವಿದ್ಯಾಲಯದ ಸಹ ಭಾಗಿತ್ವ ದೊಂದಿಗೆ ಕೈಗೊಳ್ಳಲಾಗಿದ್ದ ಈ ಸಂಶೋಧನೆಗೆ ಲಭಿಸಿದ ಅಮೇರಿಕನ್ ಪೇಟೆಂಟ್ನ ರಕ್ಷಣೆಯು 20 ವರ್ಷಗಳ ಸುದೀರ್ಘಾವಧಿಯಾಗಿದ್ದಾಗಿದೆ. ಈ ನಿರ್ದಿಷ್ಟ ಸಂಶೋಧನಾ ಫಲಿತಗಳ ಆಧಾರದ ಅವಿಷ್ಕಾರ, ಬಳಕೆ ಮತ್ತು ಮಾರಾಟದ ಹಕ್ಕು ಸ್ವಾಮ್ಯವು ಕಾಲೇಜಿನ ಈ ಇಬ್ಬರು ಪ್ರಾಧ್ಯಾಪಕರದ್ದಾಗಿದೆ. ಈ ಫಲಿತಗಳನ್ನು ಅನ್ವಯಿಸಿ ಉತ್ಪನ್ನ ತಯಾರಿಕೆ, ಬಳಕೆ ಮತ್ತು ಮಾರಾಟದಿಂದ ಇತರರನ್ನು ಅಮೇರಿಕನ್ ಪೇಟೆಂಟ್ ನಿರ್ಬಂಧಿಸುತ್ತದೆ.
ಡಾ.ನಫೀಸತ್ ಮತ್ತು ಡಾ.ಶಶಿಪ್ರಭಾ ಅವರು ವಿಭಾಗದ ಪ್ರಯೋಗಾಲಯದಲ್ಲಿಯೇ ಸಂಶೋಧನೆ ಕೈಗೊಂಡು ಅಮೇರಿಕನ್ ಪೇಟೆಂಟ್ ವಿಶ್ವ ಮಾನ್ಯತೆ ಪಡೆದಿರುವುದು ಹೆಮ್ಮೆಯ ವಿಷಯ.
ಪ್ರತಿಷ್ಠಿತ ಅಮೇರಿಕನ್ ಪೇಟೆಂಟ್ನ ಮನ್ನಣೆಯಿಂದ ಭವಿಷ್ಯದ ವಿನೂತನ ಸಂಶೋಧನಾ ಹೆಜ್ಜೆ ಗಳಿಗೆ ಹೊಸದೊಂದು ಮಾದರಿ ಸೃಷ್ಟಿಯಾದಂತಾಗಿದೆ ಎಂದು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ , ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ವಿಶ್ವನಾಥ ಪಿ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ. ಎ. ಕುಮಾರ ಹೆಗ್ಡೆ ಅವರು ಪ್ರಾಧ್ಯಾಪಕರ ಸಂಶೋಧನಾ ಸಾಧನೆ ಪ್ರಶಂಸನೀಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್