ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನೇನು ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದೆ.
ಜಾರಿ ನಿರ್ದೇಶನಾಲಯದ ಬಲವಂತದ ಕ್ರಮದಿಂದ ಕೇಜ್ರಿವಾಲ್ ಅವರಿಗೆ ಯಾವುದೇ ರಕ್ಷಣೆ ನೀಡಲು ನ್ಯಾಯಾಲಯ ನಿರಾಕರಿಸಿದ್ದರಿಂದ ಹೈಕೋರ್ಟ್ ತೀರ್ಪಿನ ಕೆಲವೇ ಗಂಟೆಗಳ ನಂತರ, ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರ ಸಿವಿಲ್ ಲೈನ್ ನಿವಾಸಕ್ಕೆ ಶೋಧ ವಾರಂಟ್ ನೊಂದಿಗೆ ತೆರಳಿದರು. ಕೆಲವು ಗಂಟೆಗಳ ನಂತರ, ಕೇಜ್ರಿವಾಲ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.
ಇದೇ ವಿಚಾರದಲ್ಲಿ ಕಳೆದ ವರ್ಷ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿತ್ತು, ಆದರೆ ವಿವಿಧ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಕೇಜ್ರಿವಾಲ್ ಇಲ್ಲಿಯವರೆಗೆ ಎಲ್ಲಾ ಸಮನ್ಸ್ಗಳನ್ನು ತಪ್ಪಿಸಿಕೊಂಡಿದ್ದರು. ಜಾರಿ ನಿರ್ದೇಶನಾಲಯದ ಸಮನ್ಸ್ ಅಸಾಂವಿಧಾನಿಕ ಎಂದು ಪ್ರಶ್ನಿಸಿ ಕೇಜ್ರಿವಾಲ್ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಂತದಲ್ಲಿ ಪ್ರಕರಣದಲ್ಲಿ ಸಿಲುಕುವ ಉದ್ದೇಶವಿಲ್ಲ ಎಂದು ನ್ಯಾಯಾಲಯ ಗುರುವಾರ ಹೇಳಿದ ನಂತರ ಕೇಜ್ರಿವಾಲ್ ಅವರಿಗೆ ದೊಡ್ಡ ಹೊಡೆತ ಬಿದ್ದು ಬಂಧನದ ಭೀತಿ ಎದುರಾಗಿತ್ತು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿಯೇ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವರಾಗಿದ್ದ ಸಂಜಯ್ ಸಿಂಗ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಮದ್ಯದ ತನಿಖೆಗೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆಯಷ್ಟೇ ದೊಡ್ಡ ಬಂಧನದ ಒಂದು ವಾರದ ನಂತರ ಕೇಜ್ರಿವಾಲ್ ಅವರ ಬಂಧನವಾಗಿದೆ. ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರನ್ನು ಕಳೆದ ವಾರ ಹೈದರಾಬಾದ್ನಲ್ಲಿ ಬಂಧಿಸಿ ನವದೆಹಲಿಗೆ ಕರೆತರಲಾಗಿತ್ತು. ಕವಿತಾ ಅವರ ಬಂಧನವು ಕೇಜ್ರಿವಾಲ್ ಅವರು ಇಡಿಯ ಮುಂದಿನ ಗುರಿಯಾಗಲಿದ್ದಾರೆ ಎಂಬ ಸುಳಿವುಗಳಿದ್ದವು.
ಜಾರ್ಖಂಡ್ ಹೇಮಂತ್ ಸೊರೆನ್ ಬಂಧನದ ನಂತರ ಇತ್ತೀಚಿನ ದಿನಗಳಲ್ಲಿ ಬಂಧನಕ್ಕೊಳಗಾದ ಎರಡನೇ ಮುಖ್ಯಮಂತ್ರಿ ಕೇಜ್ರಿವಾಲ್. ಹೇಮಂತ್ ಸೊರೆನ್ ಅವರು ಚಂಪೈ ಸೊರೆನ್ ಅವರಿಗೆ ಸರ್ಕಾರದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ದಾರಿ ಮಾಡಿಕೊಟ್ಟರೆ, ಎಎಪಿ ನಾಯಕತ್ವ ಗುರುವಾರ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಮತ್ತು ರಾಷ್ಟ್ರ ರಾಜಧಾನಿಯನ್ನು ಜೈಲಿನಿಂದ ಆಳಲಾಗುವುದು ಎಂದು ಹೇಳಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ.
ಕೇಜ್ರಿವಾಲ್ ಅವರ ಬಂಧನವನ್ನು ರದ್ದುಗೊಳಿಸುವಂತೆ ಪಕ್ಷವು ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದೆ ಎಂದು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ ಹೇಳಿದ್ದಾರೆ. “ನಾವು ಇಂದು ರಾತ್ರಿಯೇ ಸುಪ್ರೀಂ ಕೋರ್ಟ್ನಿಂದ ತುರ್ತು ವಿಚಾರಣೆಯನ್ನು ಕೇಳಿದ್ದೇವೆ” ಎಂದು ಅತಿಶಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಏನಿದು ನೀತಿ
ದೆಹಲಿಯಲ್ಲಿ ಎರಡು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಹೊಸ ಅಬಕಾರಿ ನೀತಿ ಜಾರಿಗೊಳಿಸಿತ್ತು. ಮದ್ಯ ಮಾರಾಟದಿಂದ ಹೆಚ್ಚಿನ ಆದಾಯ ಪಡೆಯುವ ನಿಟ್ಟಿನಲ್ಲಿ ಕೇಜ್ರಿವಾಲ್ ಸರ್ಕಾರವು ಹಳೆಯ ಅಬಕಾರಿ ನೀತಿ ಬದಲಿಸಿ ಹೊಸ ನೀತಿ ಜಾರಿಗೊಳಿಸಿದ್ದರು. ಆದರೆ ಈ ನೀತಿ ಜಾರಿಗೊಳಿಸುವ ಮೂಲಕ ಭಾರೀ ಭ್ರಷ್ಟಾಚಾರ ನಡೆದಿದೆ ಎನ್ನುವ ಗಂಭೀರ ಆರೋಪಗಳು ಬಂದಿದ್ದವು. .
ಮಧ್ಯವರ್ತಿಗಳು, ಮಾರಾಟಗಾರರು ಮತ್ತು ಅಧಿಕಾರಿಗಳಿಗೆ ಲಾಭವಾಗುವಂತೆ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಲಾಬಿ ನಡೆದಿದೆ. ಇದಕ್ಕೆ ರಾಜಕೀಯ ನಾಯಕರ ಪ್ರೋತ್ಸಾಹವಿದ್ದು, ಆ ವಿಷಯದತ್ತ ಗಮನ ಹರಿಸಲಾಗಿದೆ ಎಂದು ಸಿಬಿಐ ಹೇಳಿತ್ತು.
ದೆಹಲಿ ಸರ್ಕಾರ ಮದ್ಯ ನೀತಿಯನ್ನು ಹಿಂಪಡೆದಿದೆ. ಆದರೂ ಅದರ ವಿನ್ಯಾಸ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿವೆ. ಮದ್ಯದ ಲಾಬಿಯಿಂದ ಸುಮಾರು 30 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಸಿಬಿಐ ಹೇಳುತ್ತಿದೆ.
ಕಳೆದ ವರ್ಷದ ಫೆಬ್ರವರಿಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಬಂಧನವಾಗಿತ್ತು. ಈ ಅಬಕಾರಿ ಹಗರಣ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಸುಮಾರು 12 ಜನರನ್ನು ಈಗಾಗಲೇ ಬಂಧಿಸಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್