ಮಂಗಳೂರು: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಮೃತಪಟ್ಟಿರುವ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದ್ದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ಸೊ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದೀಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು ಎನ್ನಲಾಗಿದೆ.
ಪ್ರಕರಣದ ಆರೋಪಿಗಳು ಬೆಳ್ತಂಗಡಿಗೆ ಬಂದು ವ್ಯವಹಾರ ಕುದುರಿಸಿದ್ದರು ಎಂಬ ಅನುಮಾನವೂ ಇದೀಗ ವ್ಯಕ್ತವಾಗುತ್ತಿದೆ. ತಮಗೆ ಜಮೀನಿನಲ್ಲಿ ಭಾರೀ ಪ್ರಮಾಣದ ಚಿನ್ನ ಸಿಕ್ಕಿದೆ, ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೇಳಿ ಈ ತಂಡ ವ್ಯವಹಾರ ಕುದುರಿಸಿದೆ ಎನ್ನಲಾಗಿದೆ. ಬೆಳ್ತಂಗಡಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಇಸಾಕ್ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದೆ. ತುಮಕೂರಿನ ಆ ತಂಡ ಇವರನ್ನು ನಂಬಿಸಿ ತುಮಕೂರಿಗೆ ಕರೆಸಿಕೊಂಡಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ತುಮಕೂರಿಗೆ ತೆರಳಿದ್ದ ಈ ಮೂವರನ್ನು ಹತ್ತು ದಿನಗಳಿಗೂ ಹೆಚ್ಚು ಕಾಲ ಅಲ್ಲಿಯೇ ಇರಿಸಿಕೊಂಡ ದುಷ್ಕರ್ಮಿಗಳು ಬಳಿಕ ವಂಚಿಸಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿದ್ದಾರೆ.
ಮೃತ ಮೂವರ ಕುಟುಂಬಗಳ ಸದಸ್ಯರು, ಸಂಬಂಧಿಕರು ತುಮಕೂರಿಗೆ ತೆರಳಿದ್ದಾರೆ. ಮೂರೂ ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಗುರುತು ಪತ್ತೆ ಅಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಡಿ.ಎನ್.ಎ. ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಪೋಲಿಸರು ತಿಳಿಸಿರುವುದಾಗಿ ಮಾಹಿತಿಯಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?