ಮಂಗಳೂರು: ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಮೃತಪಟ್ಟಿರುವ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದ್ದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ಸೊ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದೀಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು ಎನ್ನಲಾಗಿದೆ.
ಪ್ರಕರಣದ ಆರೋಪಿಗಳು ಬೆಳ್ತಂಗಡಿಗೆ ಬಂದು ವ್ಯವಹಾರ ಕುದುರಿಸಿದ್ದರು ಎಂಬ ಅನುಮಾನವೂ ಇದೀಗ ವ್ಯಕ್ತವಾಗುತ್ತಿದೆ. ತಮಗೆ ಜಮೀನಿನಲ್ಲಿ ಭಾರೀ ಪ್ರಮಾಣದ ಚಿನ್ನ ಸಿಕ್ಕಿದೆ, ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೇಳಿ ಈ ತಂಡ ವ್ಯವಹಾರ ಕುದುರಿಸಿದೆ ಎನ್ನಲಾಗಿದೆ. ಬೆಳ್ತಂಗಡಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಇಸಾಕ್ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದೆ. ತುಮಕೂರಿನ ಆ ತಂಡ ಇವರನ್ನು ನಂಬಿಸಿ ತುಮಕೂರಿಗೆ ಕರೆಸಿಕೊಂಡಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿವೆ. ತುಮಕೂರಿಗೆ ತೆರಳಿದ್ದ ಈ ಮೂವರನ್ನು ಹತ್ತು ದಿನಗಳಿಗೂ ಹೆಚ್ಚು ಕಾಲ ಅಲ್ಲಿಯೇ ಇರಿಸಿಕೊಂಡ ದುಷ್ಕರ್ಮಿಗಳು ಬಳಿಕ ವಂಚಿಸಿ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿದ್ದಾರೆ.
ಮೃತ ಮೂವರ ಕುಟುಂಬಗಳ ಸದಸ್ಯರು, ಸಂಬಂಧಿಕರು ತುಮಕೂರಿಗೆ ತೆರಳಿದ್ದಾರೆ. ಮೂರೂ ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಗುರುತು ಪತ್ತೆ ಅಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿ ಡಿ.ಎನ್.ಎ. ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಪೋಲಿಸರು ತಿಳಿಸಿರುವುದಾಗಿ ಮಾಹಿತಿಯಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್