ರಿಯಾದ್ ಝೋನ್ ಅಧೀನದಲ್ಲಿರುವ ಕೆಸಿಎಫ್ ರಬುವ ಸೆಕ್ಟರ್ ವತಿಯಿಂದ ಕಳೆದ ಶುಕ್ರವಾರ ಗ್ರ್ಯಾಂಡ್ ಇಫ್ತಾರ್ ಕೂಟವು ಯಶಸ್ವಿಯಾಗಿ ನಡೆಯಿತು. ಸಂಜೆ 5ಕ್ಕೆ KCF ರಬುವ ಸೆಕ್ಟರ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿ ಅವರ ಅಧ್ಯಕ್ಷತೆಯಲ್ಲಿ ಸಯ್ಯಿದ್ ಜಲಾಲುದ್ದೀನ್ ಅಲ್ -ಹಾದಿ ತಂಙಳ್ ಉಜಿರೆ ಅವರ ನೇತೃತ್ವದಲ್ಲಿ ಆತ್ಮೀಯ ಮಜ್ಲಿಸ್ ನಡೆಯಿತು.ಬಳಿಕ ನಡೆದ ಬೃಹತ್ ಇಫ್ತಾರ್ ಕೂಟದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಮಗ್ರಿಬ್ ನಮಾಝ್ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಯ್ಯಿದ್ ಉಜಿರೆ ತಂಙಳ್ ರವರು KCF ಕುರಿತ ತನ್ನ ಮನದಾಳದ ಮಾತುಗಳನ್ನು ಹಂಚಿಕೊಂಡರು.
ಇದೇ ಸಮಯ ಗ್ರಾಂಡ್ ಇಫ್ತಾರ್ ಕಾರ್ಯಕ್ರಮಕ್ಕೆ ಅಹರ್ನಿಶಿ ದುಡಿದ ಇರ್ಫಾನ್ ಕನ್ಯಾರಕೋಡಿ ಮತ್ತು ಮುಖ್ತಾರ್ ಹಳೆಯಂಗಡಿ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಹಲವು ಉಲಮಾ ಉಮರಾ ನಾಯಕರು ಉಪಸ್ಥಿತರಿದ್ದರು.
ಇಫ್ತಾರ್ ಕೂಟ ಸ್ವಾಗತ ಸಮಿತಿ ಚೆಯರ್ಮ್ಯಾನ್ ಅಬ್ದುಲ್ ಅಝೀಝ್ ಮೂಡಿಗೆರೆ, ವೈಸ್ ಚೆಯರ್ಮ್ಯಾನ್ ಅಬ್ದುಲ್ ಸಮದ್ ಗಂಡಿಬಾಗಿಲು, ಕನ್ವೀನರ್ PKM ಆಸಿಫ್ ಉರುವಾಲು ಪದವು,ವೈಸ್ ಕನ್ವೀನರ್ ಅಶ್ರಫ್ ತೌಡುಗೋಳಿ ಕೋಶಾಧಿಕಾರಿ ಅಬ್ದುಲ್ ಮಜೀದ್ ಹಳೆಯಂಗಡಿ ಸಲಹೆ ಗಾರರಾಗಿ ಇಸ್ಮಾಯಿಲ್ ಮದನಿ ಹಾಗೂ ಯಾಕೂಬ್ ಮದನಿ ಹಾಗೂ ಎಲ್ಲಾ ಸೆಕ್ಟರ ಹಾಗೂ ಯುನಿಟ್ ನಾಯಕರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕೊನೆಯಲ್ಲಿ ರಶೀದ್ ಮದನಿ ಉರುವಾಲು ಪದವು ಇವರ ನೇತೃತ್ವದಲ್ಲಿ ಬುರ್ಧಾ ಮಜ್ಲಿಸ್ ನೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್