ಕಾಸರಗೋಡು | ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಕೊಲೆಯ ಉದ್ದೇಶವನ್ನು ಸ್ಥಾಪಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಮುಸ್ಲಿಂ ಸಮುದಾಯದ ಮೇಲಿನ ದ್ವೇಷವೇ ಕೊಲೆಗೆ ಕಾರಣ ಎಂಬ ಆರೋಪವನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಬಟ್ಟೆಯ ಮೇಲಿನ ರಕ್ತದ ಕಲೆಗಳ ಡಿಎನ್ಎ ಪರೀಕ್ಷೆಯನ್ನೂ ನಡೆಸಿಲ್ಲ. ರಿಯಾಝ್ ಮೌಲವಿ ಅವರ ಕೊಠಡಿಯಿಂದ ವಶಪಡಿಸಿಕೊಂಡ ಫೋನ್ ಮತ್ತು ಸಿಮ್ಗಳನ್ನು ಪರಿಶೀಲಿಸಲಾಗಿಲ್ಲ. ತನಿಖೆ ಏಕಪಕ್ಷೀಯವಾಗಿತ್ತು ಎಂದೂ ತೀರ್ಪು ಹೇಳುತ್ತದೆ.
ರಿಯಾಝ್ ಮೌಲವಿ ಅವರ ಹತ್ಯೆಗೂ ಮುನ್ನ ಒಡನಾಟದಲ್ಲಿದ್ದವರನ್ನು ಪತ್ತೆ ಮಾಡಿಲ್ಲ. ತನಿಖಾ ತಂಡ ಈ ಅವಕಾಶವನ್ನು ಕಳೆದುಕೊಂಡಿದೆ ಎಂದು ನ್ಯಾಯಾಲಯ ಹೇಳಿದೆ. ಆರೋಪಿಗಳ ಆರ್ಎಸ್ಎಸ್ ಸಂಪರ್ಕವನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಪು ಹೇಳಿದೆ.
ಕಾಸರಗೋಡು ಮುಹಮ್ಮದ್ ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಪ್ರಕರಣದ ವಿಚಾರಣೆ ನಡೆಸಿದರು. ಕೇಲುಗುಡ್ಡೆಯ ಅಜೇಶ್ ಅಲಿಯಾಸ್ ಅಪ್ಪು ಮತ್ತು ನಿತಿನ್ಕುಮಾರ್ ಮತ್ತು ಕೇಲುಗುಡ್ಡೆ ಗಂಗೈ ರಸ್ತೆಯ ಅಖಿಲೇಶ್ ಅಲಿಯಾಸ್ ಅಖಿಲ್ ಬಂಧಿತ ಆರೋಪಿಗಳು. ಆರೋಪಿಗಳಿಗೆ ಈವರೆಗೂ ಜಾಮೀನು ಸಿಗದ ಕಾರಣ ಏಳು ವರ್ಷಗಳಿಂದ ಜೈಲಿನಲ್ಲಿದ್ದರು. ಕಾಸರಗೋಡು ಹಳೆ ಚೂರಿ ಮದರಸಾದ ಶಿಕ್ಷಕರಾಗಿದ್ದ ಕರ್ನಾಟಕದ ಕೊಡಗು ನಿವಾಸಿ ಮುಹಮ್ಮದ್ ರಿಯಾಝ್ ಮೌಲವಿ ಅವರನ್ನು 2017ರ ಮಾರ್ಚ್ 20ರಂದು ಆರೋಪಿಗಳು ಹತ್ಯೆ ಮಾಡಿದ್ದರು. ಕಣ್ಣೂರು ಕ್ರೈಂ ಬ್ರಾಂಚ್ ಎಸ್ಪಿ ಡಾ.ಎ.ಶ್ರೀನಿವಾಸನ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ