ಕಾಸರಗೋಡು | ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದ ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಕೊಲೆಯ ಉದ್ದೇಶವನ್ನು ಸ್ಥಾಪಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ. ಮುಸ್ಲಿಂ ಸಮುದಾಯದ ಮೇಲಿನ ದ್ವೇಷವೇ ಕೊಲೆಗೆ ಕಾರಣ ಎಂಬ ಆರೋಪವನ್ನು ಪ್ರಾಸಿಕ್ಯೂಷನ್ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ. ಬಟ್ಟೆಯ ಮೇಲಿನ ರಕ್ತದ ಕಲೆಗಳ ಡಿಎನ್ಎ ಪರೀಕ್ಷೆಯನ್ನೂ ನಡೆಸಿಲ್ಲ. ರಿಯಾಝ್ ಮೌಲವಿ ಅವರ ಕೊಠಡಿಯಿಂದ ವಶಪಡಿಸಿಕೊಂಡ ಫೋನ್ ಮತ್ತು ಸಿಮ್ಗಳನ್ನು ಪರಿಶೀಲಿಸಲಾಗಿಲ್ಲ. ತನಿಖೆ ಏಕಪಕ್ಷೀಯವಾಗಿತ್ತು ಎಂದೂ ತೀರ್ಪು ಹೇಳುತ್ತದೆ.
ರಿಯಾಝ್ ಮೌಲವಿ ಅವರ ಹತ್ಯೆಗೂ ಮುನ್ನ ಒಡನಾಟದಲ್ಲಿದ್ದವರನ್ನು ಪತ್ತೆ ಮಾಡಿಲ್ಲ. ತನಿಖಾ ತಂಡ ಈ ಅವಕಾಶವನ್ನು ಕಳೆದುಕೊಂಡಿದೆ ಎಂದು ನ್ಯಾಯಾಲಯ ಹೇಳಿದೆ. ಆರೋಪಿಗಳ ಆರ್ಎಸ್ಎಸ್ ಸಂಪರ್ಕವನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಪು ಹೇಳಿದೆ.
ಕಾಸರಗೋಡು ಮುಹಮ್ಮದ್ ರಿಯಾಝ್ ಮೌಲವಿ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಪ್ರಕರಣದ ವಿಚಾರಣೆ ನಡೆಸಿದರು. ಕೇಲುಗುಡ್ಡೆಯ ಅಜೇಶ್ ಅಲಿಯಾಸ್ ಅಪ್ಪು ಮತ್ತು ನಿತಿನ್ಕುಮಾರ್ ಮತ್ತು ಕೇಲುಗುಡ್ಡೆ ಗಂಗೈ ರಸ್ತೆಯ ಅಖಿಲೇಶ್ ಅಲಿಯಾಸ್ ಅಖಿಲ್ ಬಂಧಿತ ಆರೋಪಿಗಳು. ಆರೋಪಿಗಳಿಗೆ ಈವರೆಗೂ ಜಾಮೀನು ಸಿಗದ ಕಾರಣ ಏಳು ವರ್ಷಗಳಿಂದ ಜೈಲಿನಲ್ಲಿದ್ದರು. ಕಾಸರಗೋಡು ಹಳೆ ಚೂರಿ ಮದರಸಾದ ಶಿಕ್ಷಕರಾಗಿದ್ದ ಕರ್ನಾಟಕದ ಕೊಡಗು ನಿವಾಸಿ ಮುಹಮ್ಮದ್ ರಿಯಾಝ್ ಮೌಲವಿ ಅವರನ್ನು 2017ರ ಮಾರ್ಚ್ 20ರಂದು ಆರೋಪಿಗಳು ಹತ್ಯೆ ಮಾಡಿದ್ದರು. ಕಣ್ಣೂರು ಕ್ರೈಂ ಬ್ರಾಂಚ್ ಎಸ್ಪಿ ಡಾ.ಎ.ಶ್ರೀನಿವಾಸನ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್