ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಮಂಗಳೂರಿನ ಬಿಜೆಪಿ ಕಚೇರಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಮೇಯರ್ ಸುಧೀರ್ ಶೆಟ್ಟಿ ಮಂಗಳೂರಿನ ಮುಸ್ಲಿಮ್ ಮತ್ಸ್ಯ ವ್ಯಾಪಾರಿಗಳು ಮತ್ತು ಮೊಗವೀರ ಸಮುದಾಯದ ಮದ್ಯೆ ಮತೀಯ ದ್ವೇಷ ಹಂಚಲು ಪ್ರಯತ್ನಿಸಿದ್ದಾರೆ.
ಇದು ಚುನಾವಣೆ ಹತ್ತಿರ ಬರುವಾಗ ಬಿಜೆಪಿಯ ಎಂದಿನ ಚಾಳಿಯೇ ಆಗಿರುತ್ತದೆ.
ಆದರೆ ಮಂಗಳೂರಿನ ಧಕ್ಕೆಯಲ್ಲಿ ವಿಭಿನ್ನ ಸಮುದಾಯದ ಜನರು ಅದೆಷ್ಟೋ ವರ್ಷಗಳಿಂದ ಸೌಹಾರ್ಧ ಯುತ ವ್ಯವಹಾರ ನಡೆಸಿಕೊಂಡು ಬರುತ್ತಿರುವುದು ಮಂಗಳೂರಿನ ಮತ್ತು ಜಿಲ್ಲೆಯ ಮತ್ಸೋಧ್ಯಮವೇ ಸಾಕ್ಷಿ.ಇಲ್ಲಿ ಮೀನುಗಾರರಿಗೆ ಯಾವುದೇ ಮತೀಯ ದ್ವೇಷ ಇಲ್ಲ. ಪರಸ್ಪರ ಸಹಕಾರ ಕೊಡು ಕೊಳ್ಳುವಿಕೆ ಇಲ್ಲಿನ ಶಾಶ್ವತ ಧರ್ಮ.
ಈ ಹಿಂದೆ ಈದ್ ರಜೆಯ ವಿಷಯದಲ್ಲಿ ಸ್ಥಳೀಯ ಸ್ವಯಂ ಘೋಷಿತ ಪುಡಾರಿ ಒಬ್ಬ ಮುಸ್ಲಿಮರ ಮತ್ತು ಮೊಗವೀರರ ಮಧ್ಯೆ ದ್ವೇಷ ಬಿತ್ತಲು ಪ್ರಯತ್ನಿಸಿ ವಿಫಲವಾಗಿದ್ದು, ಈಗ ಹಾಲಿ ಮೇಯರ್ ಸುಧೀರ್ ಶೆಟ್ಟಿ ದ್ವೇಷವೆಂಬ ಬಲೆಯಲ್ಲಿ ಮಂಗಳೂರಿನ ಸಾಮರಸ್ಯದ ಮತ್ಸ್ಯವನ್ನು ಹಿಡಿಯಲು ಹೋದರೆ ಮಂಗಳೂರಿನ ಜನತೆ ಸುಧೀರ್ ಶೆಟ್ಟಿಯಂತಹ ಅವಿವೇಕಿ ಅಲ್ಲ ಎಂದು ತಿಳಿಯುವುದು ಒಳಿತು ಎಂದು ಮಾಜಿ ಮೇಯರ್ ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ಧಕ್ಕೆಯ ಸೌಹಾರ್ದತೆ ಕರ್ನಾಟಕದ ಇಡೀ ಜನತೆಗೆ ಮಾದರಿ ಆಗಿದೆ ಎಂದು ತಿಳಿಯಲಿ. ಚುನಾವಣೆ ಪ್ರಚಾರದಲ್ಲಿ ಸುಧೀರ್ ಶೆಟ್ಟಿ ಮತ್ತು ಅಭ್ಯರ್ಥಿ ಕೋಮು ರಹಿತ ವಿಷಯಗಳನ್ನು ಜನರಲ್ಲಿ ಪ್ರಸ್ತಾಪಿಸಿ ಮತ ಯಾಚಿಸಲಿ ಎಂದು ಕೆ.ಅಶ್ರಫ್( ಮಾಜಿ ಮೇಯರ್)
ಅಧ್ಯಕ್ಷರು. ಮಂಗಳೂರು ಧಕ್ಕೆ ಹಸಿಮೀನು ಮಾರಾಟ ಮತ್ತು ವ್ಯಾಪಾರಸ್ಥರ ಸಂಘ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ