ಎ ಪಿ ಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಗಳಲ್ಲಿ ಉಪಕುಲಪತಿ ನೇಮಕ ಗೊಳಿಸಿಲು ಕೇರಳ ಸರಕಾರ ಮುಂದಾಗಿರುವುದಾಗಿ ವರದಿಯಾಗಿದೆ. ಕುಲಾಧಿಪತಿಗಳಾದ ರಾಜ್ಯಪಾಲರನ್ನು ಕಡೆಗಣಿಸಿ ಸರಕಾರವು ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ವಿಶ್ವವಿದ್ಯಾಲಯ ಕಾನೂನುಗಳ ತಿದ್ದುಪಡಿ ಮಸೂದೆ – 2021, 2022, ಕೇರಳ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ – 2022 ಸೇರಿದಂತೆ ಹಲವು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೆ, ನಿರ್ದಿಷ್ಟವಾದ ಕಾರಣವನ್ನೂ ನೀಡದೇ, ಸಹಿಯೂ ಹಾಕದೇ ಇರುವುದು ಅಸಾಂವಿಧಾನಿಕ ಎಂದು ತೀರ್ಪು ನೀಡುವಂತೆ ಕೇರಳ ಸರ್ಕಾರ ಇತ್ತೀಚಿಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿತ್ತು .
ಉಪಕುಲಪತಿ ಯ ನೇಮಕ ಪ್ರಕ್ರಿಯೆಯಲ್ಲಿ ಸರಕಾರ ಪ್ರಮುಖ ಪಾತ್ರ ವಹಿಸಲು ಅವಕಾಶ ಕೊಡುವ ತಿದ್ದುಪಡಿ ಮಸೂದೆ ಗೆ
ರಾಷ್ಟ್ರ ಪತಿಯ ಅಂಕಿತ ಬೀಳದಿದ್ದರೂ ಅದೇ ಮಸೂದೆ ಯನುಸಾರ ಸರಕಾರವು ಸರ್ಚ್ ಕಮಿಟಿ ರಚನೆಗೆ ಆದೇಶ ಹೊರಡಿಸಿದೆ ಎಂದು ಕೆಲವು ಮಳಯಾಲಂ ಮಾಧ್ಯಮಗಳು ವರದಿ ಮಾಡಿವೆ.
ವಿಶ್ವವಿದ್ಯಾನಿಲಯ, ಯುಜಿಸಿ ಮತ್ತು ಉನ್ನತ ಶಿಕ್ಷಣ ಪರಿಷತ್ತಿನ ಪ್ರತಿನಿಧಿಗಳನ್ನು ಶೋಧನಾ ಸಮಿತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಡಿಜಿಟಲ್ ವಿಶ್ವವಿದ್ಯಾಲಯದ ಉಪಕುಲಪತಿಗಳಿಗೆ ತಾಂತ್ರಿಕ ವಿಶ್ವವಿದ್ಯಾಲಯದ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ರಿಯಾಜ್ ಮೌಲವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಗೆ ಕೆಟಿ ಜಲೀಲ್ ಟೀಕೆ
ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ
ರಿಯಾಝ್ ಮೌಲವಿ ಹತ್ಯೆ: ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಮತ್ತು ತನಿಖಾಧಿಕಾರಿ ವಿರುದ್ಧ ಗಂಭೀರ ಆರೋಪ
ರಿಯಾಝ್ ಮೌಲವಿ ಹತ್ಯೆ: ಅನಿರೀಕ್ಷಿತ ತೀರ್ಪು ನ್ಯಾಯಾಂಗದ ಮೇಲಿನ ನಂಬಿಕೆ ಕಳೆದುಕೊಳ್ಳಲಿದೆ- ಎಸ್ವೈಎಸ್
ಕಾಸರಗೋಡು: ರಿಯಾಝ್ ಮೌಲವಿ ಹತ್ಯೆ ಪ್ರಕರಣ- ಆರ್ಎಸ್ಎಸ್ ಕಾರ್ಯಕರ್ತರಾದ ಆರೋಪಿಗಳು ಖುಲಾಸೆ
ಅಪಹರಿಸಲ್ಪಟ್ಟ ಬಾಲಕಿ ಪತ್ತೆ- ಮಗುವನ್ನು ಬಿಟ್ಟು ಅಪಹರಣಕಾರರು ಪರಾರಿ