janadhvani

Kannada Online News Paper

ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ

ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಕೆ.ಕೆ.ಬಾಲಕೃಷ್ಣನ್ ಅವರನ್ನು ಆಲಪ್ಪುಳ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ನ್ಯಾಯಾಧೀಶರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣದ ತೀರ್ಪಿಗೂ ವರ್ಗಾವಣೆಗೂ ಸಂಬಂಧವಿಲ್ಲ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.

ಮದ್ರಸಾ ಶಿಕ್ಷಕ ರಿಯಾಝ್ ಮೌಲ್ವಿಯನ್ನು ಮಸೀದಿಗೆ ನುಗ್ಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಾದ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಪ್ರಕರಣದಲ್ಲಿ ತನಿಖಾ ತಂಡ ಮತ್ತು ಪ್ರಾಸಿಕ್ಯೂಷನ್ ವೈಫಲ್ಯವನ್ನು ನ್ಯಾಯಾಲಯ ಟೀಕಿಸಿದೆ. ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಪ್ರಕ್ರಿಯೆ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

error: Content is protected !! Not allowed copy content from janadhvani.com