janadhvani

Kannada Online News Paper

ಪ್ರಜ್ವಲ್ ರೇವಣ್ಣಗೆ ವಿರೋಧ: ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಬಿಜೆಪಿಗರು

ಹಾಸನ : ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದರು. ಜನತಾ ದಳ-ಎಸ್ ಹಾಲಿ ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಆರಂಭಿಸಿದ್ದಾರೆ.

ಗೌಡರ ಆಪ್ತ ಅನುಯಾಯಿ ಉದ್ದೂರು ಪುರುಷೋತ್ತಮ್ ಮತ್ತಿತರರು ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಪಟೇಲರಿಗೆ ಮತ ಯಾಚಿಸಿದರು. ಆದರೆ, ಅವರು ತಮ್ಮ ಹಿಂಬಾಲಕರಲ್ಲ, ಎನ್ ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಪ್ರೀತಮ್ ಗೌಡ ಪ್ರತಿಕ್ರಿಯಿಸಿದ್ದಾರೆ.

ಈ ಹಿಂದೆ ಹಾಸನ ಕ್ಷೇತ್ರವನ್ನು ಪಕ್ಷಕ್ಕೆ ನೀಡಬಾರದು ಹಾಗೂ ಬಿಜೆಪಿ ಅಭ್ಯರ್ಥಿಯನ್ನು ನಿಲ್ಲಿಸಬೇಕು ಮುಂತಾದ ಬೇಡಿಕೆಯನ್ನು ಸ್ಥಳೀಯ ಮುಖಂಡರು ಹೈಕಮಾಂಡ್ ಮುಂದೆ ಇಟ್ಟಿದ್ದರು . ಬಳಿಕ ಪ್ರೀತಮ್ ಗೌಡ ಸೇರಿದಂತೆ ಬಿಜೆಪಿ ಮುಖಂಡರು ಪ್ರಜ್ವಲ್ ನಾಮಪತ್ರ ಸಲ್ಲಿಕೆ ಸಮಾರಂಭದಿಂದ ದೂರ ಉಳಿದಿದ್ದರು.

error: Content is protected !! Not allowed copy content from janadhvani.com