ಕೊಚ್ಚಿ | ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ಆರೋಪಿಗಳ ಖುಲಾಸೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲು ವಿಫಲವಾಗಿದೆ ಮತ್ತು ಸಾಕ್ಷ್ಯಾಧಾರಗಳ ಬಲದಿಂದಾಗಿ ಏಳು ವರ್ಷಗಳವರೆಗೆ ಆರೋಪಿಗಳಿಗೆ ಜಾಮೀನು ನೀಡಲಾಗಿಲ್ಲ ಎಂದು ಸರ್ಕಾರವು ಹೈಕೋರ್ಟ್ನಲ್ಲಿ ಹೇಳಿದೆ. ಮೂವರು ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ಕಳುಹಿಸಿದೆ. ಆರೋಪಿಗಳು ತಮ್ಮ ಪಾಸ್ಪೋರ್ಟ್ಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಪರಿಧಿಯಿಂದ ಹೊರಗೆ ಹೋಗಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಬೇಸಿಗೆ ರಜೆಯ ಬಳಿಕ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಮದ್ರಸಾ ಶಿಕ್ಷಕ ರಿಯಾಝ್ ಮೌಲವಿಯನ್ನು ಮಸೀದಿಯಲ್ಲಿ ಹತ್ಯೆಗೈದ ಪ್ರಕರಣದಲ್ಲಿ ಆರ್ಎಸ್ಎಸ್ ಕಾರ್ಯಕರ್ತರಾಗಿದ್ದ ಆರೋಪಿಗಳನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಪ್ರಕರಣದಲ್ಲಿ ತನಿಖಾ ತಂಡ ಮತ್ತು ಪ್ರಾಸಿಕ್ಯೂಷನ್ ವೈಫಲ್ಯವನ್ನು ನ್ಯಾಯಾಲಯ ಟೀಕಿಸಿತ್ತು. ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ನಂತರ ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಮೂರು ಆರೋಪಿಗಳಾದ ಅಜೇಶ್, ನಿತಿನ್ ಕುಮಾರ್ ಮತ್ತು ಅಖಿಲೇಶ್ ಅವರನ್ನು ಕಾಸರಗೋಡು ಪ್ರಧಾನ ಸೆಷನ್ಸ್ ನ್ಯಾಯಾಲಯ ಮಾರ್ಚ್ 30 ರಂದು ಖುಲಾಸೆಗೊಳಿಸಿತ್ತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ