ಜೈಪುರ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಬಡತನವನ್ನು ಒಂದೇ ಬಾರಿಗೆ ತೊಲಗಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಗೆ ಅವರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡಲಾಗುವುದು ಎಂದು ಅವರು ಹೇಳಿದರು.
‘ನ್ಯಾಯ ಪತ್ರ್ ’ ಎಂಬ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಲಾಗಿರುವ ಮಹಾಲಕ್ಷ್ಮಿ ಯೋಜನೆ ಗೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ರಾಹುಲ್ ಮಾತನಾಡಿದರು.
ನೀವು ಬಡತನ ರೇಖೆಗಿಂತ ಕೆಳಗಿದ್ದರೆ, ಒಮ್ಮೆಗೇ ಬಡತನವನ್ನು ತೊಡೆದುಹಾಕಲು ವರ್ಷಕ್ಕೆ 1 ಲಕ್ಷ (ತಿಂಗಳಿಗೆ 8500) ಪಾವತಿಸಲಾಗುವುದು ಎಂದು ರಾಹುಲ್ ಭರವಸೆ ನೀಡಿದರು.
ನಿರುದ್ಯೋಗ, ರೈತರಿಗೆ ಬೆಂಬಲ ಬೆಲೆ, ಬೆಲೆ ಏರಿಕೆ ಮುಂತಾದ ವಿಷಯಗಳ ಕಡೆಗೆ ಗಮನ ಸೆಳೆದ ರಾಹುಲ್,ಬಿಜೆಪಿ ವಿರುದ್ಧ ಹರಿಹಾಯ್ದರು.
ರೈತರನ್ನು ಉಗ್ರರು ಎಂದು ಕರೆದಿರುವ ಮೋದಿ, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವರೇ? ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತರು ತೆರಿಗೆ ಪಾವತಿಸುವಂತಾಯಿತು.
ರೈತರ ಹಾಗೂ ಹಿಂದುಳಿದವರ ಸಂಕಷ್ಟ, ಬಡತನ ಮುಂತಾದ ವಿಷಯಗಳನ್ನು ಚರ್ಚಿಸುವ ಆಸಕ್ತಿ ಬಿಜೆಪಿಗೆ ಇಲ್ಲ. ಕಳೆದ ಐದು ವರ್ಷಗಳಲ್ಲಿ ಮೋದಿ ಸರಕಾರದ ಭ್ರಷ್ಟಾಚಾರ ಅತಿಯಾಗಿದೆ ಎಂದು ರಾಹುಲ್ ಆರೋಪಿಸಿದರು.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್
ಕೇರಳ: ಯೆಹೋವನ ಅಧಿವೇಶನದಲ್ಲಿ ಸ್ಫೋಟ- ಒಬ್ಬರು ಮೃತ್ಯು, ಐವರ ಸ್ಥಿತಿ ಚಿಂತಾಜನಕ