ಮುಂಬೈ: ಪಶ್ಚಿಮ ಮಹಾರಾಷ್ಟ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರಾಶೀಲ ಮೋಹಿತೆ ಪಾಟೀಲ್ ಪಕ್ಷ ತೊರೆದು ಶರದ್ ಪವಾರ್ ನೇತೃತ್ವದ ಎನ್ಸಿಪಿ ಸೇರ್ಪಡೆ ಯಾಗಿದ್ದಾರೆ.
ಮಾಡಾ ಕ್ಷೇತ್ರದಲ್ಲಿ ಅವರು ಅಭ್ಯರ್ಥಿಯಾಗಬಹುದು ಎಂದು ವರದಿಯಾಗಿದೆ . ಇದು ಚುನಾವಣಾ ದೃಷ್ಟಿಯಿಂದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಮೋಹಿತೆ ಪಾಟೀಲ್ ಅವರು ಈ ಪ್ರದೇಶದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದವರು.
ಮೋಹಿತೆ ಪಾಟೀಲ್ ಕುಟುಂಬವು ಮಾದ ಕ್ಷೇತ್ರ ಒಳಗೊಂಡಿರುವ ಸೋಲಾಪುರ ಜಿಲ್ಲೆಯಲ್ಲಿ 100 ಶಾಲೆಗಳು ಮತ್ತು ಅನೇಕ ವೃತ್ತಿಪರ ಕಾಲೇಜುಗಳನ್ನು ಹೊಂದಿದೆ. 3 ಸಕ್ಕರೆ ಸಹಕಾರ ಸಂಘಗಳು ಇವರ ಕುಟುಂಬದ ನಿಯಂತ್ರಣ ದಲ್ಲಿವೆ. ಧರಾಶೀಲ್ ಅವರ ಚಿಕ್ಕಪ್ಪ ವಿಜಯ್ ಸಿಂಗ್ ಮೋಹಿತೆ ಪಾಟೀಲ್ ಅವರು ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ. ಅವರ ಬೆಂಬಲವೂ ಇದೆ.
ಹಾಲಿ ಸಂಸದ ರಂಜಿತ್ ಸಿಂಗ್ ನಾಯಕ್ ನಿಂಬಾಳ್ಕರ್ ಮಾಡಾ ಬಿಜೆಪಿ ಅಭ್ಯರ್ಥಿ. ಈ ಕ್ಷೇತ್ರವು ಪವಾರ್ ಕುಟುಂಬದ ಸ್ಥಾನವಾದ ಬಾರಾಮತಿಗೆ ಹೊಂದಿಕೊಂಡಿರುವ ಕ್ಷೇತ್ರ ವಾಗಿದೆ .















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ