ಮುಂಬೈ: ಪಶ್ಚಿಮ ಮಹಾರಾಷ್ಟ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರಾಶೀಲ ಮೋಹಿತೆ ಪಾಟೀಲ್ ಪಕ್ಷ ತೊರೆದು ಶರದ್ ಪವಾರ್ ನೇತೃತ್ವದ ಎನ್ಸಿಪಿ ಸೇರ್ಪಡೆ ಯಾಗಿದ್ದಾರೆ.
ಮಾಡಾ ಕ್ಷೇತ್ರದಲ್ಲಿ ಅವರು ಅಭ್ಯರ್ಥಿಯಾಗಬಹುದು ಎಂದು ವರದಿಯಾಗಿದೆ . ಇದು ಚುನಾವಣಾ ದೃಷ್ಟಿಯಿಂದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಮೋಹಿತೆ ಪಾಟೀಲ್ ಅವರು ಈ ಪ್ರದೇಶದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸೇರಿದವರು.
ಮೋಹಿತೆ ಪಾಟೀಲ್ ಕುಟುಂಬವು ಮಾದ ಕ್ಷೇತ್ರ ಒಳಗೊಂಡಿರುವ ಸೋಲಾಪುರ ಜಿಲ್ಲೆಯಲ್ಲಿ 100 ಶಾಲೆಗಳು ಮತ್ತು ಅನೇಕ ವೃತ್ತಿಪರ ಕಾಲೇಜುಗಳನ್ನು ಹೊಂದಿದೆ. 3 ಸಕ್ಕರೆ ಸಹಕಾರ ಸಂಘಗಳು ಇವರ ಕುಟುಂಬದ ನಿಯಂತ್ರಣ ದಲ್ಲಿವೆ. ಧರಾಶೀಲ್ ಅವರ ಚಿಕ್ಕಪ್ಪ ವಿಜಯ್ ಸಿಂಗ್ ಮೋಹಿತೆ ಪಾಟೀಲ್ ಅವರು ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ. ಅವರ ಬೆಂಬಲವೂ ಇದೆ.
ಹಾಲಿ ಸಂಸದ ರಂಜಿತ್ ಸಿಂಗ್ ನಾಯಕ್ ನಿಂಬಾಳ್ಕರ್ ಮಾಡಾ ಬಿಜೆಪಿ ಅಭ್ಯರ್ಥಿ. ಈ ಕ್ಷೇತ್ರವು ಪವಾರ್ ಕುಟುಂಬದ ಸ್ಥಾನವಾದ ಬಾರಾಮತಿಗೆ ಹೊಂದಿಕೊಂಡಿರುವ ಕ್ಷೇತ್ರ ವಾಗಿದೆ .















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ