ಚುರಚಂದಪುರ: ನರಮೇಧ ನಡೆದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ರಾಜ್ಯದಲ್ಲಿ ಇನ್ನಷ್ಟು ಕುಕಿ ಸಂಘಟನೆಗಳು ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿವೆ.
‘ನ್ಯಾಯವಿಲ್ಲದಿದ್ದರೆ ಮತವೂ ಇಲ್ಲ’ ಎಂಬುದು ಅವರ ನಿಲುವು. ಬಹಿಷ್ಕಾರದ ಭಾಗವಾಗಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿಲ್ಲ ಎಂದು ಕುಕೀಸ್ ಈ ಹಿಂದೆ ಘೋಷಿಸಿತ್ತು. ಕುಕಿ ನೇಷನ್ಸ್ ಅಸೆಂಬ್ಲಿ ಮತ್ತು ಕುಕಿ ಐಎನ್ಪಿಐ ಸಂಘಟನೆಗಳು ಚುನಾವಣೆಯಿಂದ ವಿಮುಖವಾಗಿವೆ ಮಣಿಪುರದಲ್ಲಿ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದಲ್ಲಿ ಈ ಬಾರಿ ಪೋಸ್ಟರ್, ಜಾಥಾ ಸದ್ದುಗದ್ದಲವಿಲ್ಲದ ಚುನಾವಣೆ ನ ಡೆಸಲು ಸೂಚಿಸಲಾಗಿದೆ.
ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶುಕ್ರವಾರ ತೆಂಗನೌಪಾಲ್ ಜಿಲ್ಲೆಯಲ್ಲಿ ಸಶಸ್ತ್ರ ಗುಂಪುಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಮೂವರು ಗಾಯಗೊಂಡಿದ್ದಾರೆ.
ಚೀನಾ ಮತ್ತು ಪಾಕಿಸ್ತಾನದ ಬೆದರಿಕೆಯನ್ನು ಎದುರಿಸಲು ಸಮರ್ಥವಾಗಿರುವ ಭಾರತೀಯ ಸೇನೆಯು ಮುಗ್ಧ ನಾಗರಿಕರನ್ನು ಭಯೋತ್ಪಾದಕರಿಂದ ರಕ್ಷಿಸುವಲ್ಲಿ ವಿಫಲವಾಗುತ್ತಿರುವುದು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕುಕಿ ರಾಷ್ಟ್ರೀಯ ಅಸೆಂಬ್ಲಿಯ ವಕ್ತಾರ ಮಾಂಗೆ ಬಾಯಿ ಹಾಕಿಪ್ ಹೇಳಿದ್ದಾರೆ.
ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆ ಯನ್ನೂ ಭಾರತದ ಸಂವಿಧಾನದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳಲು ಕಾರಣವಾದೀತು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಅಸಮಾಧಾನವನ್ನು ಮುಖಂಡರಿಗೆ ತಿಳಿಸಲಾಗಿದೆ.
ಭಾರತೀಯ ನಾಯಕತ್ವದ ವಿರುದ್ಧ ತಮ್ಮ ಕೋಪವನ್ನು ವ್ಯಕ್ತಪಡಿಸಲು ತಾವು ಚುನಾವಣೆಯಿಂದ ದೂರವಿರಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ . ನಮ್ಮ ನೋವು ಮತ್ತು ಸಂಕಟಗಳನ್ನು ಜಗತ್ತಿಗೆ ತಿಳಿಸಲು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಹಾಕಿಪ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)