ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿಯ ದಶವಾರ್ಷಿಕ ಮಹಾ ಸಮ್ಮೇಳನ 2024 ಮೇ 19 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.
ಇದರ ಪ್ರಚಾರಾರ್ಥ ಹಲವು ಜಿಲ್ಲೆಗಳಲ್ಲಿ ಕಲ್ಚರಲ್ ಕನ್ವೆನ್ಷನ್ ಗಳು ನಡೆಯಲಿದ್ದು ದ. ಕ ಜಿಲ್ಲಾ ವೆಸ್ಟ್ ವಿಭಾಗದ ಕಲ್ಚರಲ್ ಕನ್ವೆನ್ಷನ್ ಮೇ 7ರಂದು ಪಾಣೆಮಂಗಳೂರು ಸಾಗರ ಆಡಿಟೋರಿಯಂ ನಲ್ಲಿ ನಡೆಯಲಿದ್ದು ಇದಕ್ಕಾಗಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ಇತ್ತೀಚೆಗೆ ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆದ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್, ಎಸ್ ಜೆ ಎಂ, ಎಸ್ ಎಂ ಎ ಸಂಘಟನೆಗಳ ನಾಯಕರ ಸಭೆಯಲ್ಲಿ ರಚಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಡಿಸೇನಿಯಂ ಕರ್ನಾಟಕ ಪ್ರಚಾರ ಸಮಿತಿಯ ಅಧ್ಯಕ್ಷ ಎಂಪಿ ಎಂ ಅಶ್ರಫ್ ಸಅದಿ ಮಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷ ವಿಯು ಇಸ್ಹಾಕ್ ಝುಹ್ರಿ ಉದ್ಘಾಟಿಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ವಿಷಯ ಮಂಡಿಸಿದರು.
ರಹೀಂ ಸಅದಿ ಕತರ್, ಡಿಸೇನಿಯಂ ವರ್ಕಿಂಗ್ ಕನ್ವೀನರ್ ಸಲೀಂ ಕನ್ಯಾಡಿ ಮಾತನಾಡಿದರು. ವಿವಿಧ ಸಂಘಟನೆಗಳ ನಾಯಕರು ಭಾಗವಹಿಸಿದ್ದರು.

ನಂತರ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು.
ಚೇರ್ ಮಾನ್ ಆಗಿ ಎಸ್ ಕೆ ಖಾದರ್ ಹಾಜಿ ಮುಡಿಪು, ಜನರಲ್ ಕನ್ವೀನರ್ ಆಗಿ ಮನ್ಸೂರ್ ಹಿಮಮಿ ಮೊಂಟೆಪದವು, ಕೋಶಾಧಿಕಾರಿಯಾಗಿ ಆಲಿಕುಂಞಿ ಹಾಜಿ ಪಾರೆ, ಕಾರ್ಯಾಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಮೂಳೂರು, ವೈಸ್ ಚೇರ್ ಮಾನ್ ಗಳಾಗಿ ಬದ್ರುದ್ದೀನ್ ಅಝ್ಹರಿ ಮರ್ಕಝ್,
ರಹೀಂ ಸಅದಿ ಕತರ್, ಇಸ್ಹಾಕ್ ಝುಹ್ರಿ ಕಾನಕೆರೆ, ಲತೀಫ್ ಮಾಸ್ಟರ್ ಮಂಜನಾಡಿ, ಅಲಿ ಮದನಿ ಸೆರ್ಕಳ,ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ, ಕನ್ವೀನರ್ ಗಳಾಗಿ ರಝಾಕ್ ಸಖಾಫಿ ಕೊಳಕ್ಕೆ, ಫಾರೂಕ್ ಶೇಡಿಗುರಿ, ಸತ್ತಾರ್ ಸಖಾಫಿ ಅಡ್ಯಾರ್ ಪದವು, ಸುಹೈಲ್ ಹತ್ತನೇ ಮೈಲು, ಅಜ್ಮಲ್ ಕಾವೂರು, ಮೂಸ ಹಾಜಿ ಮುಡಿಪು, ಬಶೀರ್ ಗಾಣೆಮಾರ್, ಹಸನ್ ಹಾಜಿ, ಅಬ್ದುಲ್ ರಹಿಮಾನ್ ಪ್ರಿಂಟೆಕ್, ರಝಾಕ್ ಹಾಜಿ ಕೈಕಂಬ, ಇರ್ಷಾದ್ ಗೂಡಿನಬಳಿ ಹಾಗೂ 33 ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಪ್ರಚಾರ ಸಮಿತಿಯ ಕನ್ವೀನರ್ ನವಾಜ್ ಸಖಾಫಿ ಅಡ್ಯಾರ್ ಪದವು ಸ್ವಾಗತಿಸಿ ಮನ್ಸೂರ್ ಹಿಮಮಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ