ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿಯ ದಶವಾರ್ಷಿಕ ಮಹಾ ಸಮ್ಮೇಳನ 2024 ಮೇ 19 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.
ಇದರ ಪ್ರಚಾರಾರ್ಥ ಹಲವು ಜಿಲ್ಲೆಗಳಲ್ಲಿ ಕಲ್ಚರಲ್ ಕನ್ವೆನ್ಷನ್ ಗಳು ನಡೆಯಲಿದ್ದು ದ. ಕ ಜಿಲ್ಲಾ ವೆಸ್ಟ್ ವಿಭಾಗದ ಕಲ್ಚರಲ್ ಕನ್ವೆನ್ಷನ್ ಮೇ 7ರಂದು ಪಾಣೆಮಂಗಳೂರು ಸಾಗರ ಆಡಿಟೋರಿಯಂ ನಲ್ಲಿ ನಡೆಯಲಿದ್ದು ಇದಕ್ಕಾಗಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ಇತ್ತೀಚೆಗೆ ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆದ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್, ಎಸ್ ಜೆ ಎಂ, ಎಸ್ ಎಂ ಎ ಸಂಘಟನೆಗಳ ನಾಯಕರ ಸಭೆಯಲ್ಲಿ ರಚಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಡಿಸೇನಿಯಂ ಕರ್ನಾಟಕ ಪ್ರಚಾರ ಸಮಿತಿಯ ಅಧ್ಯಕ್ಷ ಎಂಪಿ ಎಂ ಅಶ್ರಫ್ ಸಅದಿ ಮಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷ ವಿಯು ಇಸ್ಹಾಕ್ ಝುಹ್ರಿ ಉದ್ಘಾಟಿಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ವಿಷಯ ಮಂಡಿಸಿದರು.
ರಹೀಂ ಸಅದಿ ಕತರ್, ಡಿಸೇನಿಯಂ ವರ್ಕಿಂಗ್ ಕನ್ವೀನರ್ ಸಲೀಂ ಕನ್ಯಾಡಿ ಮಾತನಾಡಿದರು. ವಿವಿಧ ಸಂಘಟನೆಗಳ ನಾಯಕರು ಭಾಗವಹಿಸಿದ್ದರು.

ನಂತರ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು.
ಚೇರ್ ಮಾನ್ ಆಗಿ ಎಸ್ ಕೆ ಖಾದರ್ ಹಾಜಿ ಮುಡಿಪು, ಜನರಲ್ ಕನ್ವೀನರ್ ಆಗಿ ಮನ್ಸೂರ್ ಹಿಮಮಿ ಮೊಂಟೆಪದವು, ಕೋಶಾಧಿಕಾರಿಯಾಗಿ ಆಲಿಕುಂಞಿ ಹಾಜಿ ಪಾರೆ, ಕಾರ್ಯಾಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಮೂಳೂರು, ವೈಸ್ ಚೇರ್ ಮಾನ್ ಗಳಾಗಿ ಬದ್ರುದ್ದೀನ್ ಅಝ್ಹರಿ ಮರ್ಕಝ್,
ರಹೀಂ ಸಅದಿ ಕತರ್, ಇಸ್ಹಾಕ್ ಝುಹ್ರಿ ಕಾನಕೆರೆ, ಲತೀಫ್ ಮಾಸ್ಟರ್ ಮಂಜನಾಡಿ, ಅಲಿ ಮದನಿ ಸೆರ್ಕಳ,ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ, ಕನ್ವೀನರ್ ಗಳಾಗಿ ರಝಾಕ್ ಸಖಾಫಿ ಕೊಳಕ್ಕೆ, ಫಾರೂಕ್ ಶೇಡಿಗುರಿ, ಸತ್ತಾರ್ ಸಖಾಫಿ ಅಡ್ಯಾರ್ ಪದವು, ಸುಹೈಲ್ ಹತ್ತನೇ ಮೈಲು, ಅಜ್ಮಲ್ ಕಾವೂರು, ಮೂಸ ಹಾಜಿ ಮುಡಿಪು, ಬಶೀರ್ ಗಾಣೆಮಾರ್, ಹಸನ್ ಹಾಜಿ, ಅಬ್ದುಲ್ ರಹಿಮಾನ್ ಪ್ರಿಂಟೆಕ್, ರಝಾಕ್ ಹಾಜಿ ಕೈಕಂಬ, ಇರ್ಷಾದ್ ಗೂಡಿನಬಳಿ ಹಾಗೂ 33 ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಪ್ರಚಾರ ಸಮಿತಿಯ ಕನ್ವೀನರ್ ನವಾಜ್ ಸಖಾಫಿ ಅಡ್ಯಾರ್ ಪದವು ಸ್ವಾಗತಿಸಿ ಮನ್ಸೂರ್ ಹಿಮಮಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ