ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿಯ ದಶವಾರ್ಷಿಕ ಮಹಾ ಸಮ್ಮೇಳನ 2024 ಮೇ 19 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ.
ಇದರ ಪ್ರಚಾರಾರ್ಥ ಹಲವು ಜಿಲ್ಲೆಗಳಲ್ಲಿ ಕಲ್ಚರಲ್ ಕನ್ವೆನ್ಷನ್ ಗಳು ನಡೆಯಲಿದ್ದು ದ. ಕ ಜಿಲ್ಲಾ ವೆಸ್ಟ್ ವಿಭಾಗದ ಕಲ್ಚರಲ್ ಕನ್ವೆನ್ಷನ್ ಮೇ 7ರಂದು ಪಾಣೆಮಂಗಳೂರು ಸಾಗರ ಆಡಿಟೋರಿಯಂ ನಲ್ಲಿ ನಡೆಯಲಿದ್ದು ಇದಕ್ಕಾಗಿ ಜಿಲ್ಲಾ ನಿರ್ವಹಣಾ ಸಮಿತಿಯನ್ನು ಇತ್ತೀಚೆಗೆ ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆದ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್, ಎಸ್ ಜೆ ಎಂ, ಎಸ್ ಎಂ ಎ ಸಂಘಟನೆಗಳ ನಾಯಕರ ಸಭೆಯಲ್ಲಿ ರಚಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಡಿಸೇನಿಯಂ ಕರ್ನಾಟಕ ಪ್ರಚಾರ ಸಮಿತಿಯ ಅಧ್ಯಕ್ಷ ಎಂಪಿ ಎಂ ಅಶ್ರಫ್ ಸಅದಿ ಮಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷ ವಿಯು ಇಸ್ಹಾಕ್ ಝುಹ್ರಿ ಉದ್ಘಾಟಿಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ವಿಷಯ ಮಂಡಿಸಿದರು.
ರಹೀಂ ಸಅದಿ ಕತರ್, ಡಿಸೇನಿಯಂ ವರ್ಕಿಂಗ್ ಕನ್ವೀನರ್ ಸಲೀಂ ಕನ್ಯಾಡಿ ಮಾತನಾಡಿದರು. ವಿವಿಧ ಸಂಘಟನೆಗಳ ನಾಯಕರು ಭಾಗವಹಿಸಿದ್ದರು.

ನಂತರ ನಿರ್ವಹಣಾ ಸಮಿತಿಯನ್ನು ರಚಿಸಲಾಯಿತು.
ಚೇರ್ ಮಾನ್ ಆಗಿ ಎಸ್ ಕೆ ಖಾದರ್ ಹಾಜಿ ಮುಡಿಪು, ಜನರಲ್ ಕನ್ವೀನರ್ ಆಗಿ ಮನ್ಸೂರ್ ಹಿಮಮಿ ಮೊಂಟೆಪದವು, ಕೋಶಾಧಿಕಾರಿಯಾಗಿ ಆಲಿಕುಂಞಿ ಹಾಜಿ ಪಾರೆ, ಕಾರ್ಯಾಧ್ಯಕ್ಷರಾಗಿ ಸಿದ್ದೀಕ್ ಸಖಾಫಿ ಮೂಳೂರು, ವೈಸ್ ಚೇರ್ ಮಾನ್ ಗಳಾಗಿ ಬದ್ರುದ್ದೀನ್ ಅಝ್ಹರಿ ಮರ್ಕಝ್,
ರಹೀಂ ಸಅದಿ ಕತರ್, ಇಸ್ಹಾಕ್ ಝುಹ್ರಿ ಕಾನಕೆರೆ, ಲತೀಫ್ ಮಾಸ್ಟರ್ ಮಂಜನಾಡಿ, ಅಲಿ ಮದನಿ ಸೆರ್ಕಳ,ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ, ಕನ್ವೀನರ್ ಗಳಾಗಿ ರಝಾಕ್ ಸಖಾಫಿ ಕೊಳಕ್ಕೆ, ಫಾರೂಕ್ ಶೇಡಿಗುರಿ, ಸತ್ತಾರ್ ಸಖಾಫಿ ಅಡ್ಯಾರ್ ಪದವು, ಸುಹೈಲ್ ಹತ್ತನೇ ಮೈಲು, ಅಜ್ಮಲ್ ಕಾವೂರು, ಮೂಸ ಹಾಜಿ ಮುಡಿಪು, ಬಶೀರ್ ಗಾಣೆಮಾರ್, ಹಸನ್ ಹಾಜಿ, ಅಬ್ದುಲ್ ರಹಿಮಾನ್ ಪ್ರಿಂಟೆಕ್, ರಝಾಕ್ ಹಾಜಿ ಕೈಕಂಬ, ಇರ್ಷಾದ್ ಗೂಡಿನಬಳಿ ಹಾಗೂ 33 ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಪ್ರಚಾರ ಸಮಿತಿಯ ಕನ್ವೀನರ್ ನವಾಜ್ ಸಖಾಫಿ ಅಡ್ಯಾರ್ ಪದವು ಸ್ವಾಗತಿಸಿ ಮನ್ಸೂರ್ ಹಿಮಮಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ