ಕುವೈತ್ ಸಿಟಿ: ಮ್ಯಾನ್ಪವರ್ ಸಾರ್ವಜನಿಕ ಪ್ರಾಧಿಕಾರ ಬೇಸಿಗೆಯ ತೀವ್ರತೆಯಲ್ಲಿ ತೆರೆದ ಸ್ಥಳಗಳಲ್ಲಿ ಮದ್ಯಾಹ್ನದ ಕೆಲಸವನ್ನು ನಿಷೇಧಿಸಲು ನಿರ್ಧರಿಸಿದೆ. ಜೂನ್ 1 ರಿಂದ ಆಗಸ್ಟ್ 31ರವರೆಗೆ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯ ವರೆಗೆ ಕಾರ್ಮಿಕರಿಗೆ ಕಡ್ಡಾಯ ಬಿಡುವಿಗೆ ಅನುಮತಿ ನೀಡಿದೆ.ಬೇಸಿಗೆಯ ಉಷ್ಣತೆ ಏರುವಾಗ ಸೂರ್ಯ ತಾಪವು ನೇರವಾಗಿ ಆಘಾತ ನೀಡುವುದನ್ನು ತಡೆಯುವುದಾಗಿದೆ ಗುರಿ.
ಈ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎನ್ನುವ ಬಗ್ಗೆ ತೀವ್ರ ತಪಾಸಣೆ ನಡೆಸಲಾಗುವುದು ಎಂದು ಮ್ಯಾನ್ ಪವರ್ ಅಥಾರಿಟಿ ಎಚ್ಚರಿಸಿದೆ.ಅದೇ ಸಮಯದಲ್ಲಿ, ಕಾನೂನು ಉಲ್ಲಂಘನೆಯ ಸೂಚನೆ ಲಭಿಸಿದ್ದಲ್ಲಿ ಮೊದಲ ಬಾರಿಗೆ ನೋಟೀಸು ಹೊರಡಿಸಲಿದೆ. ಪುನರಾವರ್ತಿತ ಅಪರಾಧಕ್ಕೆ ಪ್ರತೀಯೋರ್ವ ಕಾರ್ಮಿಕನಿಗೆ 100 ದಿನಾರ್ ದಂಡವನ್ನು ಮಾಲೀಕರು ನೀಡಬೇಕಾಗುತ್ತದೆ.
ಕಾನೂನಿನ ನಿಯಮಗಳನ್ನು ಉಲ್ಲಂಘಿಸುವರ ಫೈಲ್ಗಳನ್ನು ನಿಷ್ಕ್ರಿಯ ಗೊಳಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯದ ವಿಶೇಷ ಸಮಿತಿಯು ಈ ಬಗ್ಗೆ ಪರಿಶೋಧನೆ ನಡೆಸಲಿದೆ ಎಂದು ಮ್ಯಾನ್ ಪವರ್ ಸಾರ್ವಜನಿಕ ಪ್ರಾಧಿಕಾರ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ