ಇತಿಹಾಸ ಪ್ರಸಿದ್ಧ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕು ಎಮ್ಮೆಮಾಡು ಗ್ರಾಮದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಹಜ್ರತ್ ಸೂಫಿ ಶಹೀದ್ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಪ್ರಮುಖ ಮಹಾತ್ಮರುಗಳ ಹೆಸರಿನಲ್ಲಿ ಪ್ರತಿ ವರ್ಷ ನಡೆಸುವ ಉರೂಸ್ ಕಾರ್ಯಕ್ರಮ ಈ ವರ್ಷವು ಅತಿ ವಿಜ್ರಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ದಿನಾಂಕ 26 ಎಪೀಲ್ 2024 ರಿಂದ ಮೇ 3 ತನಕ ಈ ವರ್ಷದ ಉರೂಸ್ ಕಾರ್ಯಕ್ರಮ ನಡೆಸುವುದಾಗಿ ಸಮಿತಿಯು ತಿಳಿಸಿರುತ್ತಾರೆ.
ಎಪ್ರಿಲ್ 26 ರಂದು ಕಾರ್ಯಕ್ರಮ ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಪ್ರಾರಂಭಗೊಳ್ಳಲಿದೆ.
ಉದ್ಘಾಟನಾ ಕಾರ್ಯಕ್ರಮಕ್ಕೆ ಸೈಯ್ಯದ್ ಝೈನುಲ್ ಆಬಿದೀನ್ ಜಫ್ರಿ ತಂಙಳ್ ನೇತೃತ್ವ ವಹಿಸುವರು . ದಿನಾಂಕ 29 ಸೋಮವಾರ ಸಾರ್ವಜನಿಕ ಸಮ್ಮೇಳನ ನಡೆಯುತ್ತಿದೆ.
ಕಾರ್ಯಕ್ರಮಕ್ಕೆ ಅಧ್ಯಕ್ಷತೆಯನ್ನು ಆಟಕೋಯ ತಂಙಳ್ ಕುಂಬೋಳ್ ವಹಿಸುವರು. ಸಮ್ಮೇಳನ ಸೈಯ್ಯದ್ ಮುಈನಲಿ ಶಿಹಾಬ್ ತಂಙಳ್ ಪಾಲಕ್ಕಾಡ್ ಉದ್ಘಾಟನೆ ನೆರವೇರಿಸುವರು. ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಹಾಗೂ ಮೌಲಾನ ಶಾಫಿ ಸಅದಿ ಬೆಂಗಳೂರು ಧಾರ್ಮಿಕ ಪ್ರವಚನ ನೀಡಿವರು.
ವೇದಿಕೆಯಲ್ಲಿ
ಜಮೀರ್ ಅಹ್ಮದ್ (ಸಚಿವರು ವಕ್ಫ್ ಮಂಡಳಿ ಕರ್ನಾಟಕ)
ಶಾಸಕರಾದ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಅನ್ವರ್ ಪಾಶ (ಚೇರ್ಮನ್ ವಕ್ಫ್ ಮಂಡಳಿ ಕರ್ನಾಟಕ)
ಇನ್ನಿತರ ಧಾರ್ಮಿಕ ರಾಜಕೀಯ, ಸಾಂಸ್ಕೃತಿಕ ನೇತಾರರು ಭಾಗವಹಿಸುವರು ಅದೇ ದಿನ ಭಕ್ತಾಧಿಗಳಿಗೆ ಅನ್ನದಾನವಿರುತ್ತದೆ.
ದಿನಾಂಕ 3 ಮೇ 2024 ಸಮಾರೋಪ ಸಮಾರಂಭದಲ್ಲಿ ಬದುರುಸ್ಸಾದಾತ್ ಇಬ್ರಾಹಿಂ ಖಲೀಲ್ ತಂಙಳ್ ವಹಿಸುವರು.
ಕಾರ್ಯಕ್ರಮದ ವಿವರವನ್ನು ಪತ್ರಕಾ ಸಮ್ಮೇಳನದ ಮೂಲಕ ಸೈಯಿದ್ ಝಕರಿಯ ಸಅದಿ, ನಿಝಾರ್ ಜಾಹರಿ , ಜುಬೈರ್ ಸಿಎ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಉಪಾಧ್ಯಕ್ಷ ರಾದ ಅಶ್ರಫ್ ಕಿನಾರ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ