ಕೋಝಿಕ್ಕೋಡ್ | ಚುನಾವಣೆಯ ನಂತರವೂ ದೇಶ ಅವಿಭಜಿತವಾಗಿ ಉಳಿಯಬೇಕು ಆದ್ದರಿಂದ ಆಡಳಿತ ಮತ್ತು ರಾಜಕೀಯ ನಾಯಕತ್ವದಲ್ಲಿ ಇರುವವರು ಪ್ರಬುದ್ಧತೆಯಿಂದ ಕೂಡಿದ ಮಾತುಗಳನ್ನು ಬಳಸಬೇಕು ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಕೋಮು ವಿಭಜಕ ಹೇಳಿಕೆಗಳು ಅಂತಿಮವಾಗಿ ಇಡೀ ದೇಶವನ್ನೇ ಹಾನಿಮಾಡಲಿದೆ. ಸಾಂವಿಧಾನಿಕ ಸ್ಥಾನಗಳಲ್ಲಿ ಕುಳಿತುಕೊಳ್ಳುವವರು ಕಾರ್ಯಗಳು ಮತ್ತು ಹೇಳಿಕೆಗಳಲ್ಲಿ ತಮ್ಮ ಸ್ಥಾನದ ಘನತೆಯನ್ನು ಎತ್ತಿಹಿಡಿಯಬೇಕು.
ಚುನಾವಣೆಯಲ್ಲಿ ಗೆಲ್ಲಲು ಕೋಮುವಾದವನ್ನೇ ಅಸ್ತ್ರವನ್ನಾಗಿಸುವವರು ನಮ್ಮ ದೇಶದ ಮೇಲೆ ತೀವ್ರ ಗಾಯವನ್ನುಂಟು ಮಾಡುತ್ತಿದ್ದಾರೆ. ಅದು ಚಿಕಿತ್ಸೆಯಿಂದ ವಾಸಿಯಾಗದ ಗಾಯವಾಗಿ ನಮ್ಮ ದೇಶವನ್ನು ರೋಗಗ್ರಸ್ತ ದೇಶವನ್ನಾಗಿ ಮಾಡಲಿದೆ.
ಪ್ರಧಾನಿಯಂತಹ ವ್ಯಕ್ತಿಗಳು ಕೋಮು ದ್ವೇಷ ಹರಡುವ ಹೇಳಿಕೆ ನೀಡಬಾರದಿತ್ತು. ಮುಸಲ್ಮಾನರ ಮನದಲ್ಲಿ ನೋವನ್ನುಂಟು ಮಾಡಿದ ಹೇಳಿಕೆಯನ್ನು ಸರಿಪಡಿಸಲು ಅವರು ಸಿದ್ಧರಾಗಿರಬೇಕು. ಭಾರತದ ಮುಸ್ಲಿಂ ಅಲ್ಪಸಂಖ್ಯಾತರನ್ನು ದ್ವೇಷದ ರಾಜಕಾರಣಕ್ಕೆ ಎಳೆದುತರುವುದು ಅತ್ಯಂತ ಹೀನ ಕೃತ್ಯವಾಗಿದೆ ಎಂದು ಕಾಂತಪುರಂ ಅವರು ಹೇಳಿಕೆಯಲ್ಲಿ ಗಮನ ಸೆಳೆದರು.
ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ