ಕೋಝಿಕ್ಕೋಡ್ | ಚುನಾವಣೆಯ ನಂತರವೂ ದೇಶ ಅವಿಭಜಿತವಾಗಿ ಉಳಿಯಬೇಕು ಆದ್ದರಿಂದ ಆಡಳಿತ ಮತ್ತು ರಾಜಕೀಯ ನಾಯಕತ್ವದಲ್ಲಿ ಇರುವವರು ಪ್ರಬುದ್ಧತೆಯಿಂದ ಕೂಡಿದ ಮಾತುಗಳನ್ನು ಬಳಸಬೇಕು ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಕೋಮು ವಿಭಜಕ ಹೇಳಿಕೆಗಳು ಅಂತಿಮವಾಗಿ ಇಡೀ ದೇಶವನ್ನೇ ಹಾನಿಮಾಡಲಿದೆ. ಸಾಂವಿಧಾನಿಕ ಸ್ಥಾನಗಳಲ್ಲಿ ಕುಳಿತುಕೊಳ್ಳುವವರು ಕಾರ್ಯಗಳು ಮತ್ತು ಹೇಳಿಕೆಗಳಲ್ಲಿ ತಮ್ಮ ಸ್ಥಾನದ ಘನತೆಯನ್ನು ಎತ್ತಿಹಿಡಿಯಬೇಕು.
ಚುನಾವಣೆಯಲ್ಲಿ ಗೆಲ್ಲಲು ಕೋಮುವಾದವನ್ನೇ ಅಸ್ತ್ರವನ್ನಾಗಿಸುವವರು ನಮ್ಮ ದೇಶದ ಮೇಲೆ ತೀವ್ರ ಗಾಯವನ್ನುಂಟು ಮಾಡುತ್ತಿದ್ದಾರೆ. ಅದು ಚಿಕಿತ್ಸೆಯಿಂದ ವಾಸಿಯಾಗದ ಗಾಯವಾಗಿ ನಮ್ಮ ದೇಶವನ್ನು ರೋಗಗ್ರಸ್ತ ದೇಶವನ್ನಾಗಿ ಮಾಡಲಿದೆ.
ಪ್ರಧಾನಿಯಂತಹ ವ್ಯಕ್ತಿಗಳು ಕೋಮು ದ್ವೇಷ ಹರಡುವ ಹೇಳಿಕೆ ನೀಡಬಾರದಿತ್ತು. ಮುಸಲ್ಮಾನರ ಮನದಲ್ಲಿ ನೋವನ್ನುಂಟು ಮಾಡಿದ ಹೇಳಿಕೆಯನ್ನು ಸರಿಪಡಿಸಲು ಅವರು ಸಿದ್ಧರಾಗಿರಬೇಕು. ಭಾರತದ ಮುಸ್ಲಿಂ ಅಲ್ಪಸಂಖ್ಯಾತರನ್ನು ದ್ವೇಷದ ರಾಜಕಾರಣಕ್ಕೆ ಎಳೆದುತರುವುದು ಅತ್ಯಂತ ಹೀನ ಕೃತ್ಯವಾಗಿದೆ ಎಂದು ಕಾಂತಪುರಂ ಅವರು ಹೇಳಿಕೆಯಲ್ಲಿ ಗಮನ ಸೆಳೆದರು.
ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ದೇಶದ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ