ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆ ನಡೆಸಲಿದೆ. ಮೋದಿಯನ್ನು 6 ವರ್ಷಗಳ ಕಾಲ ನಿಷೇಧಿಸಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.
ಆನಂದ್ ಎಸ್. ಜೊಂಡಲೆ ಎಂಬ ವಕೀಲರು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಮೋದಿ ಅವರು ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸಿದ್ದಾರೆ.ಅವರ ಚುನಾವಣಾ ಭಾಷಣಗಳು ಧಾರ್ಮಿಕ ಮತ್ತು ಜಾತಿ ದ್ವೇಷವನ್ನು ಹುಟ್ಟುಹಾಕುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಡಿದ ಭಾಷಣವನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಚುನಾವಣಾ ಪ್ರಚಾರಕ್ಕೆ ದೇವರು ಅಥವಾ ಪೂಜಾ ಸ್ಥಳಗಳನ್ನು ಬಳಸಬಾರದು ಎಂಬ ನಿಯಮವನ್ನು ಮೋದಿಯವರ ಭಾಷಣ ಉಲ್ಲಂಘಿಸಿದೆ ಎಂಬುದು ಅರ್ಜಿಯಲ್ಲಿನ ಪ್ರಮುಖ ವಾದವಾಗಿದೆ. ಮೋದಿ ಅವರು ಚುನಾವಣಾ ಭಾಷಣಗಳಲ್ಲಿ ನಿರಂತರವಾಗಿ ಧರ್ಮ ಮತ್ತು ಜಾತಿಯನ್ನು ಬಳಸುತ್ತಿದ್ದಾರೆ ಎಂದೂ ಅರ್ಜಿಯಲ್ಲಿ ಹೇಳಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ