ಲಖನೌ: ವಿಶ್ವವಿದ್ಯಾಲಯದಲ್ಲಿ ನಡೆದ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಮತ್ತು ಕ್ರಿಕೆಟ್ ಆಟಗಾರರ ಹೆಸರುಗಳನ್ನು ಬರೆದಿರುವ ಹಲವಾರು ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಅಂಕಗಳನ್ನು ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಬರೆದ ಉತ್ತರದ ಗುಣಮಟ್ಟದ ಆಧಾರದ ಮೇಲೆ ಅವರಿಗೆ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ಚೌನ್ಪುರದಲ್ಲಿರುವ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀರಾಮ್’ ಮತ್ತು ಕ್ರಿಕೆಟಿಗರ ಹೆಸರುಗಳನ್ನು ಬರೆದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿರುವ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ದಿವ್ಯಾಂಶು ಸಿಂಗ್ ಅವರು ಸಲ್ಲಿಸಿದ ಆರ್ಟಿಐ ಅರ್ಜಿ ಆಧಾರದ ಮೇರೆಗೆ ಫಾರ್ಮಸಿ ಕೋರ್ಸ್ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಅಲ್ಲಲ್ಲಿ ‘ಜೈ ಶ್ರೀರಾಮ್’ ಘೋಷಣೆ ಮತ್ತು ಭಾರತೀಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇವರಿಗೆ ಮೌಲ್ಯಮಾಪಕರು ಶೇ 50ಕ್ಕಿಂತ ಹೆಚ್ಚು ಅಂಕಗಳನ್ನು ನೀಡಿದ್ದಾರೆ. ಪರಿಶೀಲನೆ ಬಳಿಕ ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗಿದೆ. ಪ್ರಕರಣದ ಕುರಿತು ರಾಜಭವನ ತನಿಖೆಗೆ ಆದೇಶಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ