ಲಖನೌ: ವಿಶ್ವವಿದ್ಯಾಲಯದಲ್ಲಿ ನಡೆದ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಮತ್ತು ಕ್ರಿಕೆಟ್ ಆಟಗಾರರ ಹೆಸರುಗಳನ್ನು ಬರೆದಿರುವ ಹಲವಾರು ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಅಂಕಗಳನ್ನು ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಬರೆದ ಉತ್ತರದ ಗುಣಮಟ್ಟದ ಆಧಾರದ ಮೇಲೆ ಅವರಿಗೆ ಅಂಕಗಳನ್ನು ನೀಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ಚೌನ್ಪುರದಲ್ಲಿರುವ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀರಾಮ್’ ಮತ್ತು ಕ್ರಿಕೆಟಿಗರ ಹೆಸರುಗಳನ್ನು ಬರೆದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿರುವ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ದಿವ್ಯಾಂಶು ಸಿಂಗ್ ಅವರು ಸಲ್ಲಿಸಿದ ಆರ್ಟಿಐ ಅರ್ಜಿ ಆಧಾರದ ಮೇರೆಗೆ ಫಾರ್ಮಸಿ ಕೋರ್ಸ್ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಅಲ್ಲಲ್ಲಿ ‘ಜೈ ಶ್ರೀರಾಮ್’ ಘೋಷಣೆ ಮತ್ತು ಭಾರತೀಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇವರಿಗೆ ಮೌಲ್ಯಮಾಪಕರು ಶೇ 50ಕ್ಕಿಂತ ಹೆಚ್ಚು ಅಂಕಗಳನ್ನು ನೀಡಿದ್ದಾರೆ. ಪರಿಶೀಲನೆ ಬಳಿಕ ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗಿದೆ. ಪ್ರಕರಣದ ಕುರಿತು ರಾಜಭವನ ತನಿಖೆಗೆ ಆದೇಶಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ