ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಗೆ(ಐಎಎಫ್) ಸೇರಿದ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಶನಿವಾರ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಜೆ ಜಿಲ್ಲೆಯ ಸೂರನಕೋಟೆ ಪ್ರದೇಶದ ಸನಾಯಿ ಟಾಪ್ ಕಡೆಗೆ ವಾಹನಗಳು ತೆರಳುತ್ತಿದ್ದಾಗ ಶಶಿಧರ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ದಾಳಿಯಲ್ಲಿ ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದೆ ಮತ್ತು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಬೃಹತ್ ಶೋಧ ಹಾಗೂ ಕಾರ್ಡನ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ