ನವದೆಹಲಿ | 50 ದಿನಗಳ ಸೆರೆವಾಸದ ನಂತರ ಅರವಿಂದ ಕೇಜ್ರಿವಾಲ್ ಜೈಲಿನಿಂದ ಹೊರಬಂದರು. ತಿಹಾರ್ ಜೈಲಿನ ಗೇಟ್ ನಂ.4ರ ಮೂಲಕ ಅವರನ್ನು ಬಿಡುಗಡೆ ಮಾಡಲಾಯಿತು. ಜೈಲಿನಿಂದ ಹೊರಬಂದ ಕೇಜ್ರವಾಲ್ಗೆ ಆಮ್ ಆದ್ಮ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಹೊರಬಂದ ನಂತರ ಕೇಜ್ರಿವಾಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ಹೇಳಿದಂತೆಯೇ ಹಿಂತಿರುಗಿದ್ದೇನೆ. ದೇಶವನ್ನು ಸರ್ವಾಧಿಕಾರದಿಂದ ಪಾರು ಮಾಡಬೇಕು, ಇದಕ್ಕಾಗಿ ದೇಶದ 140 ಕೋಟಿ ಜನರು ಒಟ್ಟಾಗಿ ಹೋರಾಡಬೇಕು ಎಂದು ದೇಶದ ಜನತೆಗೆ ಅವರು ಕರೆ ನೀಡಿದರು.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ತಿಹಾರ್ ಜೈಲಿನ ಮುಂದೆ ಕೇಜ್ರವಾಲ್ ಅವರನ್ನು ಬರಮಾಡಿಕೊಂಡರು. ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಹೊರಬಂದರು.
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.
ಅಂತಿಮ ಹಂತದ ಮತದಾನ ನಡೆಯುವ ತನಕ ಅವರಿಗೆ ಮಧ್ಯಂತರ ಜಾಮೀನು ದೊರಕಿದ್ದು ಜೂನ್ 2ರಂದು ಜೈಲಿಗೆ ವಾಪಸಾಗಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಕೇಜ್ರವಾಲ್ ಅವರನ್ನು ಬಂಧಿಸಿತ್ತು.
ತಮ್ಮ ಬಂಧನವನ್ನು ಪ್ರಶ್ನಿಸಿ ಹಾಗೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡಲು ಅನುವು ಮಾಡಿಕೊಡಲು ಜಾಮೀನು ಒದಗಿಸಬೇಕೆಂಬ ಕೇಜ್ರವಾಲ್ ಅವರ ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪಿಸಿತ್ತು.
ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ದೀಪಾಂಕರ್ ದತ್ತಾ ಅವರ ಪೀಠ ಇಂದು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಒಪ್ಪಿದೆ. ಜೂನ್ 2ರಂದು ಶರಣಾಗಬೇಕೆಂದು ನ್ಯಾಯಾಲಯ ಸೂಚಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ