ಕೊಚ್ಚಿ | ಮಲಯಾಳಿಗಳು ಸಹಿತವಿರುವವರನ್ನು ವಿದೇಶಕ್ಕೆ ಕರೆದೊಯ್ದು ಕಿಡ್ನಿ ಮಾರಾಟ ಮಾಫಿಯಾಗೆ ಒಪ್ಪಿಸುವ ಗ್ಯಾಂಗ್ನ ನಾಯಕನನ್ನು ಬಂಧಿಸಲಾಗಿದೆ. ತ್ರಿಶೂರ್ ವಲಪಾಡ್ ಮೂಲದ ಸಾಬಿತ್ ನಾಸರ್ ನನ್ನು ಕೇರಳದ ನೆಡುಂಬಾಸ್ಸೇರಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಈತ ಅಂತಾರಾಷ್ಟ್ರೀಯ ಮಾಫಿಯಾದ ಭಾಗವಾಗಿದ್ದಾನೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈ ಹಿಂದೆ ಆತನ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿತ್ತು. ಕೇಂದ್ರ ಗುಪ್ತಚರ ವರದಿಯ ಪ್ರಕಾರ ಅವನನ್ನು ಬಂಧಿಸಲಾಗಿದೆ.
ಈ ಗ್ಯಾಂಗ್ ಸಂತ್ರಸ್ತರನ್ನು ನಂಬಿಸಿ ಮೋಸ ಮಾಡಿ ವಿದೇಶಕ್ಕೆ ಕಳ್ಳಸಾಗಣೆ ಮಾಡಿ ಕಿಡ್ನಿ ವ್ಯಾಪಾರ ಮಾಡುತ್ತಿತ್ತು. ಕಿಡ್ನಿ ನೀಡಿದಾತನಿಗೆ ಅಲ್ಪ ಮೊತ್ತವನ್ನು ಪಾವತಿಸಿದ ನಂತರ ಹೆಚ್ಚಿನ ಬೆಲೆಗೆ ಮೂತ್ರಪಿಂಡಗಳನ್ನು ಮಾರಾಟ ಮಾಡುವುದಾಗಿದೆ ರೂಢಿ. ಈತ ಕಿಡ್ನಿ ದಂಧೆಗಾಗಿ ಹಲವು ಮಂದಿಯನ್ನು ವಿದೇಶಕ್ಕೆ ಕಳ್ಳಸಾಗಣೆ ಮಾಡಿರುವುದಾಗಿ ವರದಿಯಾಗಿದೆ.
ಮೊದಲು ನೆಡುಂಬಸ್ಸೆರಿಯಿಂದ ಕುವೈತ್ಗೆ ಮತ್ತು ಅಲ್ಲಿಂದ ಇರಾನ್ಗೆ ಜನರನ್ನು ಕರೆದೊಯ್ಯಲಾಗುತ್ತಿತ್ತು. ಈ ರೀತಿ ಜನರನ್ನು ಕರೆದೊಯ್ದು ವಾಪಸಾಗುತ್ತಿದ್ದ ವೇಳೆ ಸಾಬಿತ್ ನಾಸರ್ ಎಂಬಾತನನ್ನು ಬಂದಿಸಲಾಗಿದೆ. ಈತನ ವಿರುದ್ಧ ಅಂಗಾಂಗ ಸಾಗಣೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಂಗಾಂಗ ಸಾಗಣೆ ಮಾಫಿಯಾದೊಂದಿಗೆ ಇನ್ನಷ್ಟು ಮಂದಿ ಸಂಪರ್ಕ ಹೊಂದಿದ್ದಾರೆಂದು ಈತನ ವಿಚಾರಣೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಈ ಪ್ರಕರಣದಲ್ಲಿ ಸಿಕ್ಕಿಬೀಳಲಿದ್ದಾರೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಿಗೂ ತನಿಖೆ ವಿಸ್ತರಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಪೊಲೀಸರು ಸಿದ್ಧವಾಗಿಲ್ಲ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ