ಲಂಡನ್ | ಸಿಂಗಾಪುರ್ ಏರ್ಲೈನ್ಸ್ ಬೋಯಿಂಗ್ 777 ಆಕಾಶದಲ್ಲಿ ದರಂತಕ್ಕೊಳಗಾಗಿದೆ. ಲಂಡನ್-ಸಿಂಗಪುರ ವಿಮಾನವು ಆಕಾಶ ಸುಳಿಗೆ ತುತ್ತಾಗಿದ್ದು, ಅಪಘಾತದಲ್ಲಿ 73 ವರ್ಷದ ಬ್ರಿಟಿಷ್ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 30 ಪ್ರಯಾಣಿಕರು ಗಾಯಗೊಂಡಿದ್ದಾರೆ.
ವಿಮಾನದಲ್ಲಿ 211 ಪ್ರಯಾಣಿಕರು ಮತ್ತು 18 ಸಿಬ್ಬಂದಿ ಇದ್ದರು. ವಿಮಾನವು 37,000 ಅಡಿಯಿಂದ 31,000 ಅಡಿಗಳಿಗೆ ಏಕಾಏಕಿ ಕುಸಿದಿದೆ. ಲಂಡನ್ನ ಹೀಬ್ರೂ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ ಅಪಘಾತಕ್ಕೀಡಾಗಿದೆ ಎಂದು ಸಿಂಗಾಪುರ ಏರ್ಲೈನ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೆಟ್ಟ ವಾತಾವರಣದ ಕಾರಣದಿಂದ ವಿಮಾನವು ತೀವ್ರ ಅಲುಗಾಟಕ್ಕೆ (ಪ್ರಕ್ಷುಬ್ಧತೆ-Turbulence) ಒಳಗಾಗಿದೆ. ದಾರಿ ಮಧ್ಯೆ ಒಮ್ಮೆಲೆ ಅಲುಗಾಡಲು ಶುರುವಾಯಿತು. ಬರುಬರುತ್ತ ವಿಮಾನದಲ್ಲಿ ಪ್ರಕ್ಷುಬ್ಧತೆ ಜಾಸ್ತಿಯಾಗಿ ಮಧ್ಯಾಹ್ನ 3.45ರ ಹೊತ್ತಿಗೆ ಬ್ಯಾಂಕಾಕ್ನ ಸುವರ್ಣಭೂಮಿ ಏರ್ಪೋರ್ಟ್ನಲ್ಲಿ ತುರ್ತುಭೂಸ್ಪರ್ಶ ಮಾಡಲಾಗಿದೆ.
ಬ್ಯಾಂಕಾಕ್ನಲ್ಲಿ ವಿಮಾನ ತುರ್ತು ಭೂಸ್ಪರ್ಶವಾಗಿದ್ದರಿಂದ ಥಾಯ್ ವಲಸೆ ಪೊಲೀಸರು ಅಲ್ಲಿ ಎಲ್ಲ ಭದ್ರತಾ ವ್ಯವಸ್ಥೆ ಮಾಡಿದ್ದಾರೆ. ವೈದ್ಯಕೀಯ ಸಿಬ್ಬಂದಿಯೂ ಹಾಜರಿದ್ದು ಅಗತ್ಯ ಸೇವೆ ಒದಗಿಸಿದ್ದಾರೆ. 18 ಮಂದಿಯನ್ನು ಒಂದು ಆಸ್ಪತ್ರೆಗೆ ಕಳಿಸಲಾಗಿದೆ.. 12 ಜನರಿಗೆ ಇನ್ನೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಏರ್ಲೈನ್ಸ್ ತಿಳಿಸಿದೆ. ಒಟ್ಟಾರೆ ಗಾಯಗೊಂಡವರು ಎಷ್ಟು ಮಂದಿ ಎಂದೂ ತಿಳಿದುಬಂದಿಲ್ಲ. ಹಾಗೇ ಮೃತಪಟ್ಟ ಪ್ರಯಾಣಿಕನ ಹೆಸರೂ ದೃಢಪಟ್ಟಿಲ್ಲ. ಆದರೆ ಅವರು 73 ವರ್ಷದವರಾಗಿದ್ದು, ಬ್ರಿಟಿಷ್ ಪ್ರಜೆ ಎನ್ನಲಾಗಿದೆ. ‘ಬ್ಯಾಂಕಾಕ್ನಲ್ಲಿ ವಿಮಾನ ಇಳಿದ ಬಳಿಕ ಎಲ್ಲ ಪ್ರಯಾಣಿಕರಿಗೂ ಆದ್ಯತೆಯ ಮೇರೆಗೆ ಅಗತ್ಯ ನೆರವು ಒದಗಿಸಲಾಗಿದೆ. ಥೈಲ್ಯಾಂಡ್ನ ಸ್ಥಳೀಯ ಅಧಿಕಾರಿಗಳು, ಪೊಲೀಸರೊಂದಿಗೆ ಸಂಪರ್ಕದಲ್ಲಿ ಇದ್ದೇವೆ. ಸಿಂಗಾಪುರದಿಂದ ಕೂಡ ಒಂದು ವೈದ್ಯಕೀಯ ತಂಡವನ್ನ ಅಲ್ಲಿಗೆ ಕಳಿಸಿಕೊಡಲಾಗಿದೆ’ ಎಂದೂ ಸಿಂಗಾಪುರ ಏರ್ಲೈನ್ಸ್ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?