ದಮ್ಮಾಮ್: ಸೌದಿ ಅರೇಬಿಯಾದ ದಮಾಮ್ ನಲ್ಲಿ ನೆಲೆಸಿರುವ ಕರಾವಳಿಯ ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಮೂರು ವರ್ಷದ ಮಗುವೊಂದು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮನೆಯೊಳಗಿದ್ದ ರೆಫ್ರಿಜರೇಟರ್ನ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ.
ಮೂಡಬಿದ್ರೆಯ ಕೋಟೆಬಾಗಿಲು ಮೂಲದ ಶೇಖ್ ಫಹದ್ ಮತ್ತು ಸಲ್ಮಾ ಕಾಝಿ ದಂಪತಿಯ ಕಿರಿಯ ಪುತ್ರ ಸಾಯಿಕ್ ಶೇಖ್ (3) ಮೃತಪಟ್ಟಿದೆ. ಭಾರೀ ಹೊಗೆಯಿಂದ ಉಸಿರುಕಟ್ಟಿದ ಕಾರಣ ಮರಣ ಸಂಭವಿಸಿದೆ. ದಮ್ಮಾಮ್ ಅಲ್ ಹುಸೇನಿ ಕಾಂಪೌಂಡ್ನಲ್ಲಿರುವ ವಿಲ್ಲಾದಲ್ಲಿ ಈ ದುರ್ಘಟನೆ ನಡೆದಿದೆ. ಹಿರಿಯ ಮಗ ಸಾಹಿರ್ ಶೇಖ್ (5) ಹೊರತುಪಡಿಸಿ ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ಮಧ್ಯರಾತ್ರಿ ವಿಲ್ಲಾದ ನೆಲ ಮಹಡಿಯಲ್ಲಿದ್ದ ರೆಫ್ರಿಜರೇಟರ್ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ವ್ಯಾಪಿಸಿದೆ. ಇದರೊಂದಿಗೆ ಇಡೀ ಕೋಣೆಯಲ್ಲಿ ಕಪ್ಪು ಹೊಗೆ ತುಂಬಿತ್ತು. ನಿದ್ದೆಯಿಂದ ಎದ್ದ ಮನೆಯವರು ದಟ್ಟ ಹೊಗೆಯಿಂದಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮನೆಯವರು ಕಾಂಪೌಂಡ್ನ ಸಿಬ್ಬಂದಿಯನ್ನು ಕರೆದು ರಕ್ಷಿಸುವಂತೆ ಮನವಿ ಮಾಡಿದರು. ಜನರು ಧಾವಿಸಿದರಾದರೂ, ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ ಬಳಿಕ ಮನೆಯವರನ್ನು ಹೊರಗೆ ತರಲಾಯಿತು. ಆ ವೇಳೆಗಾಗಲೇ ಅವರು ಭಾರೀ ಹೊಗೆಯನ್ನು ಸೇವಿಸಿ ಪ್ರಜ್ಞಾಹೀನರಾಗಿದ್ದರು. ಚಿಂತಾಜನಕ ಸ್ಥಿತಿಯಲ್ಲಿರುವ ಶೇಖ್ ಫಹದ್ ಅವರನ್ನು ದಮ್ಮಾಮ್ ಅಲ್ಮಾನಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮತ್ತು ಅವರ ಪತ್ನಿ ಸಲ್ಮಾ ಕಾಝಿ ಅವರನ್ನು ದಮ್ಮಾಮ್ ವೈದ್ಯಕೀಯ ಸಂಕೀರ್ಣದ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ. ಹಿರಿಯ ಪುತ್ರ ಸಾಹಿರ್ ಶೇಖ್ ಚೇತರಿಸಿಕೊಂಡಿದ್ದಾನೆ. ಅಗ್ನಿಶಾಮಕ ದಳ ಬರುವಷ್ಟರಲ್ಲಿ ಸಾಯಿಕ್ ಶೇಖ್ ಎಂಬ ಮೂರು ವರ್ಷದ ಮಗು ಮೃತಪಟ್ಟಿತ್ತು.


















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?