ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಮಸೀದಿಯಲ್ಲಿ ಪ್ರಾರ್ಥನೆಗೆ ಜನ ತುಂಬಿ ಹೆಚ್ಚುವರಿ ಕೆಲವರು ರಸ್ತೆಯಲ್ಲಿ ನಮಾಝ್ ನಿರ್ವಹಿಸಿದ ಕಾರಣಕ್ಕೆ ಪೊಲೀಸರು ಸುಮೋಟೋ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ನಮಾಝ್ ನಿರ್ವಹಣೆಯನ್ನು ವಿಡಿಯೋ ಚಿತ್ರೀಕರಿಸಿ ಉದ್ವಿಗ್ನ ಸೃಷ್ಟಿಸಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಮತ್ತು ಇತರ ಧರ್ಮೀಯರ ರಸ್ತೆಯಲ್ಲಿನ ಪ್ರಾರ್ಥನೆಯ ವಿರುದ್ಧವೂ ಪೊಲೀಸರು ಇನ್ನು ಮುಂದೆ ಸ್ವಯಂ ಪ್ರಕರಣ ದಾಖಲಿಸಲಿ ಎಂದು ಕೆ.ಅಶ್ರಫ್ ಪ್ರತಿಕ್ರಿಯಿಸಿದ್ದಾರೆ.
ಆರಾಧನಾ ಕೇಂದ್ರಗಳಲ್ಲಿ ಜನ ಜಮಾವಣೆ ಅಧಿಕವಾದಾಗ ಜನರು ಸಾಂದರ್ಭಿಕವಾಗಿ ಸಾರ್ವಜನಿಕ ಸ್ಥಳವನ್ನು ಅವಲಂಬಿಸುವುದು ವಾಡಿಕೆ. ಅದು ಉದ್ದೇಶ ಪೂರಕ ವಾಗಿರುವುದಿಲ್ಲ. ಆದರೆ ಈ ಘಟನೆಯನ್ನು ಚಿತ್ರೀಕರಿಸಿ ವೈಭವೀಕರಿಸುವ ಮನಸ್ಥಿತಿ ಸರಿಯಲ್ಲ. ಇತ್ತೀಚೆಗೆ ರೈಲ್ವೆ ನಿಲ್ದಾಣದಲ್ಲಿ ಸಂಪೂರ್ಣ ಪ್ಲಾಟ್ ಫಾರಂ ಅನ್ನು ಉಪಯೋಗಿಸಿ ಮಂತ್ರ ವಾಚನ ಪಠಿಸಿ ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಆಚರಣೆ ಗೈಯುವಾಗ ಪೊಲೀಸರು ಎಲ್ಲಿದ್ದರು ಎಂದು ಉತ್ತರಿಸಬೇಕಿದೆ.
ಸ್ವಯಂ ಪ್ರೇರಿತ ಪ್ರಕರಣ ಒಂದೇ ಧರ್ಮದ ಅನುಯಾಯಿಗಳಿಗೆ ಅನ್ವಯ ವಾಗುವುದಿಲ್ಲ. ಸರ್ವರಿಗೂ ಅನ್ವಯವಾಗಲಿ. ಕೇವಲ ಐದು ನಿಮಿಷದ ನಮಾಝ್ ಪ್ರಾರ್ಥನೆ ರಸ್ತೆಯಲ್ಲಿ ತೊಂದರೆ ಆಗುವುದಾದಾರೆ, ದಿನಗಟ್ಟಲೆ ರಸ್ತೆಗಳನ್ನು ತಡೆ ನಿರ್ಮಿಸಿ ಜರುಗುವ ಧಾರ್ಮಿಕ ಆಚರಣೆಗಳು ಏನನ್ನು ಸೂಚಿಸುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಉತ್ತರಿಸಬೇಕಿದೆ. ಪೊಲೀಸರು ಪಕ್ಷಪಾತಿಯ ಧೋರಣೆ ಅನುಸರಿಸಿದರೆ ಹೋರಾಟ ಮುಂದುವರಿಯಲಿದೆ ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ