ಮಂಗಳೂರು: ಮಸೀದಿಯ ಮುಂಬಾಗದಲ್ಲಿ ನಮಾಜು ನಿರ್ವಹಿಸಿದವರ ವಿರುದ್ಧ ದಾಖಲಿಸಲಾದ ಸುಮೊಟೋ ಪ್ರಕರಣವನ್ನು ಸ್ಥಗಿತಗೊಳಿಸುವುದಾಗಿ ಪೋಲೀಸ್ ಆಯುಕ್ತರಿಂದ ಭರವಸೆ ಲಭಿಸಿದೆ.
ಇತ್ತೀಚೆಗೆ ಮಂಗಳೂರು ಕಂಕನಾಡಿ ಮಸೀದಿ ಹೊರಾಂಗಣದಲ್ಲಿ ಜುಮಾ ನಮಾಝ್ ವೇಳೆಯಲ್ಲಿ ಮಸೀದಿಯಲ್ಲಿ ಜನ ಭರ್ತಿ ಆದ ನಂತರ ಭೇಟಿ ನೀಡಿದ ಕೆಲವು ವ್ಯಕ್ತಿಗಳು ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿದ್ದು, ಅದನ್ನು ಸ್ಥಳೀಯರೊಬ್ಬರು ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದರು.
ಈ ಬಗ್ಗೆ ಸುದ್ದಿಯಾದ ಕಾರಣದಿಂದ ಮಂಗಳೂರು ನಗರ ಪೊಲೀಸರು ನಮಾಝ್ ನಿರ್ವಹಿಸಿದ ವ್ಯಕ್ತಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದು, ಪೊಲೀಸರ ಈ ನಡೆಗೆ ಮುಸ್ಲಿಮ್ ಸಮುದಾಯದ ಕಡೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇಂದು ಮುಸ್ಲಿಮ್ ಮುಂದಾಳುಗಳು ನಿಯೋಗವೊಂದು ಪೋಲೀಸು ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಪೋಲೀಸು ಆಯುಕ್ತರು ಸದರಿ ಪ್ರಕರಣದಲ್ಲಿ ತನಿಖೆ ಸ್ಥಗಿತ ಗೊಳಿಸಿ ಪ್ರಕರಣ ಮುಕ್ತಾಯ ಗೊಳಿಸಿದುವುದಾಗಿ ಭರವಸೆ ನೀಡಿದ್ದಾಗಿ ನಿಯೋಗ ವ್ಯಕ್ತಪಡಿಸಿದೆ.
ನಿಯೋಗದಲ್ಲಿ ಕೊಡಿಚಲ್ ಇಬ್ರಾಹಿಮ್, ಕನಚೂರು ಮೋನು ಹಾಜಿ, ಕೆ.ಅಶ್ರಫ್ ಮಾಜಿ ಮೇಯರ್, ಎಂ.ಎಸ್. ಮೊಹಮ್ಮದ್, ಶಾಹುಲ್ ಹಮೀದ್, ಅಬ್ದುಲ್ ಲತೀಫ್, ಸಂಶುದ್ದೀನ್, ಅಬ್ದುಲ್ ರೌಫ್, ಸಿರಾಜ್ ಬಜ್ಪೆ, ನಿಸಾರ್ ಬಜ್ಪೆ, ವಹಾಬ್ ಕುದ್ರೋಳಿ, ಮೊಹಮ್ಮದ್ ಬಪ್ಪಳಿಕೆ, ರಫೀಕ್ ಕಣ್ಣೂರು, ಕಣ್ಣೂರು ಸಲೀಮ್ ಮತ್ತಿತರರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ