ಮಂಗಳೂರು: ಮಸೀದಿಯ ಮುಂಬಾಗದಲ್ಲಿ ನಮಾಜು ನಿರ್ವಹಿಸಿದವರ ವಿರುದ್ಧ ದಾಖಲಿಸಲಾದ ಸುಮೊಟೋ ಪ್ರಕರಣವನ್ನು ಸ್ಥಗಿತಗೊಳಿಸುವುದಾಗಿ ಪೋಲೀಸ್ ಆಯುಕ್ತರಿಂದ ಭರವಸೆ ಲಭಿಸಿದೆ.
ಇತ್ತೀಚೆಗೆ ಮಂಗಳೂರು ಕಂಕನಾಡಿ ಮಸೀದಿ ಹೊರಾಂಗಣದಲ್ಲಿ ಜುಮಾ ನಮಾಝ್ ವೇಳೆಯಲ್ಲಿ ಮಸೀದಿಯಲ್ಲಿ ಜನ ಭರ್ತಿ ಆದ ನಂತರ ಭೇಟಿ ನೀಡಿದ ಕೆಲವು ವ್ಯಕ್ತಿಗಳು ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿದ್ದು, ಅದನ್ನು ಸ್ಥಳೀಯರೊಬ್ಬರು ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿದ್ದರು.
ಈ ಬಗ್ಗೆ ಸುದ್ದಿಯಾದ ಕಾರಣದಿಂದ ಮಂಗಳೂರು ನಗರ ಪೊಲೀಸರು ನಮಾಝ್ ನಿರ್ವಹಿಸಿದ ವ್ಯಕ್ತಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿದ್ದು, ಪೊಲೀಸರ ಈ ನಡೆಗೆ ಮುಸ್ಲಿಮ್ ಸಮುದಾಯದ ಕಡೆಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಇಂದು ಮುಸ್ಲಿಮ್ ಮುಂದಾಳುಗಳು ನಿಯೋಗವೊಂದು ಪೋಲೀಸು ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಪೋಲೀಸು ಆಯುಕ್ತರು ಸದರಿ ಪ್ರಕರಣದಲ್ಲಿ ತನಿಖೆ ಸ್ಥಗಿತ ಗೊಳಿಸಿ ಪ್ರಕರಣ ಮುಕ್ತಾಯ ಗೊಳಿಸಿದುವುದಾಗಿ ಭರವಸೆ ನೀಡಿದ್ದಾಗಿ ನಿಯೋಗ ವ್ಯಕ್ತಪಡಿಸಿದೆ.
ನಿಯೋಗದಲ್ಲಿ ಕೊಡಿಚಲ್ ಇಬ್ರಾಹಿಮ್, ಕನಚೂರು ಮೋನು ಹಾಜಿ, ಕೆ.ಅಶ್ರಫ್ ಮಾಜಿ ಮೇಯರ್, ಎಂ.ಎಸ್. ಮೊಹಮ್ಮದ್, ಶಾಹುಲ್ ಹಮೀದ್, ಅಬ್ದುಲ್ ಲತೀಫ್, ಸಂಶುದ್ದೀನ್, ಅಬ್ದುಲ್ ರೌಫ್, ಸಿರಾಜ್ ಬಜ್ಪೆ, ನಿಸಾರ್ ಬಜ್ಪೆ, ವಹಾಬ್ ಕುದ್ರೋಳಿ, ಮೊಹಮ್ಮದ್ ಬಪ್ಪಳಿಕೆ, ರಫೀಕ್ ಕಣ್ಣೂರು, ಕಣ್ಣೂರು ಸಲೀಮ್ ಮತ್ತಿತರರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ