ರಿಯಾದ್: ಸೌದಿ ಜೈಲಿನಲ್ಲಿರುವ ಅಬ್ದುಲ್ ರಹೀಮ್ ಅವರ ಬಿಡುಗಡೆ ಪ್ರಕ್ರಿಯೆಗಾಗಿ ವಾರಸುದಾರರು ರಾಜಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಬಿಡುಗಡೆಯ ಅಂತಿಮ ಹಂತ ತಲುಪಿದೆ. ಇಂದು ಬೆಳಗ್ಗೆ ಎರಡೂ ಕಡೆಯವರು ಗವರ್ನರೇಟ್ ಕಚೇರಿಗೆ ಆಗಮಿಸಿ ಸಾಕ್ಷಿದಾರರಾಗಿ ಒಪ್ಪಂದಕ್ಕೆ ಸಹಿ ಹಾಕಿದರು. ಒಂದೂವರೆ ಮಿಲಿಯನ್ ಸೌದಿ ರಿಯಾಲ್ಗಳ ಚೆಕ್ ಅನ್ನು ಸಹ ಗವರ್ನರೇಟ್ಗೆ ಹಸ್ತಾಂತರಿಸಲಾಯಿತು. ಪ್ರಕರಣ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಗವರ್ನರೇಟ್, ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಬಳಿಕ ರಹೀಮ್ ಬಿಡುಗಡೆ ಸಾಧ್ಯವಾಗಲಿದೆ.
ಇಂದು ಸಹಿ ಮಾಡಿದ ರಾಜಿ ಒಪ್ಪಂದ, ಚೆಕ್ ಸೇರಿದಂತೆ ದಾಖಲೆಗಳನ್ನು ಗವರ್ನರೇಟ್ ನ್ಯಾಯಾಲಯಕ್ಕೆ ಹಸ್ತಾಂತರಿಸಲಿದೆ. ಅಷ್ಟರೊಳಗೆ ಎರಡೂ ಕಡೆಯ ವಕೀಲರು ನ್ಯಾಯಾಲಯದ ಸಮಯ ಕೇಳುವರು. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಸಿಟ್ಟಿಂಗ್ ಸಮಯವನ್ನು ನೀಡಲಿದೆ. ಕೋರ್ಟ್ ನೀಡಿದ ದಿನದಂದು ಗಲ್ಲು ಶಿಕ್ಷೆ ರದ್ದು, ಬಿಡುಗಡೆ ಸೇರಿದಂತೆ ತೀರ್ಪು ಬರುವ ನಿರೀಕ್ಷೆ ಇದೆ.
ಬಕ್ರೀದ್ ಹಬ್ಬ ಸಮೀಪಿಸುತ್ತಿರುವುದರಿಂದ ನ್ಯಾಯಾಲಯದಿಂದ ಶೀಘ್ರ ದಿನಾಂಕ ಸಿಕ್ಕರೆ ಮಾತ್ರ ಹಬ್ಬಕ್ಕೂ ಮುನ್ನ ಬಿಡುಗಡೆ ಸಾಧ್ಯ.ಇಲ್ಲವಾದಲ್ಲಿ ಹಬ್ಬದ ನಂತರ ಬಿಡುಗಡೆ ಆಗಲಿದೆ. ಹಣ ಹಸ್ತಾಂತರಿಸುವ ಮೂಲಕ ಪ್ರಕರಣದಲ್ಲಿನ ಪ್ರಮುಖ ಅಡಚಣೆಗಳು ತೆರವುಗೊಂಡಿದೆ. ಆದರೂ, ಬಿಡುಗಡೆಗಾಗಿ ಒಂದಷ್ಟು ದಿನ ಕಾಯಬೇಕು ಎಂಬುದು ಕಾನೂನು ನೆರವು ಸಮಿತಿಯ ಆಶಯ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ