ಸಂಘಟನಾ ಚಟುವಟಿಕೆ ಶ್ರೇಷ್ಠ ಆರಾಧನೆಯಾಗಿದ್ದು ಸಮಾಜಕ್ಕೆ ನೆರವಾಗಲು ಎಲ್ಲಾ ಕಾರ್ಯಕರ್ತರು ಸಿದ್ಧರಾಗಬೇಕೆಂದು ಖಾಝಿ ಮಾಣಿ ಉಸ್ತಾದ್ ಕರೆ ನೀಡಿದರು. ಪಾಣೆ ಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ ನಡೆದ ಕರ್ನಾಟಕ ಮುಸ್ಲಿಂ ಜಮಾಅತ್ ನ ಸರ್ಕಲ್ ಸಮಾವೇಶದ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜುಲೈ ಮತ್ತು ಆಗಷ್ಟ್ ತಿಂಗಳಲ್ಲಿ ರಾಜ್ಯಾಧ್ಯಂತ ನಡೆಯುವ ‘ಸರ್ಕಲ್ ಇನ್ ಸೈಟ್’ ಸರ್ಕಲ್ ಸಮಾವೇಶದ ಸಿದ್ಧತೆಗಾಗಿ ಆಯೋಜಿಸಿದ ಈ ಶಿಬಿರದಲ್ಲಿ ಸರ್ಕಲ್ ನ ಆಯ್ದ ಪ್ರತಿನಿಧಿಗಳು ಭಾಗವಹಿಸಿದರು. ‘ನಾಯಕತ್ವವನ್ನು ಅನುಭವಿಸಿರಿ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುವ ಸರ್ಕಲ್ ಸಮಾವೇಶದ ಲಾಂಛನ, ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಎಸ್.ಪಿ.ಹಂಝ ಸಖಾಫಿ, ಅಬ್ದುಲ್ ಹಮೀದ್ ಬಜ್ಪೆ ವಿವಿಧ ವಿಷಯಗಳಲ್ಲಿ ಶಿಬಿರಾರ್ಥಿಗಳಿಗೆ ತರಭೇತಿ ನೀಡಿದರು. ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಪಿ.ಪಿ ಅಹ್ಮದ್ ಸಖಾಫಿ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಅಬೂಸುಫಿಯಾನ್ ಮದನಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಹೀಂ ಸ ಅದಿ ಧನ್ಯವಾದವಿತ್ತರು. ಜಿ.ಎಂ. ಮುಹಮ್ಮದ್ ಕಾಮಿಲ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು. ಮುಸ್ಲಿಂ ಜಮಾಅತಿನ ನೂರಕ್ಕೂ ಮಿಕ್ಕ ಸರ್ಕಲ್ ಗಳಲ್ಲಿ ಮುಂದಿನ ಎರಡು ತಿಂಗಳು ‘ಸರ್ಕಲ್ ಇನ್ ಸೈಟ್’ ಕಾರ್ಯಕ್ರಮ ನಡೆಯಲಿದೆ .
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ