ರಾಜ್ಯ ಸರಕಾರಕ್ಕೆ ಮುಸ್ಲಿಂ ಜಮಾಅತ್ ಮನವಿ.ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ದುರ್ಭಲಗೊಳಿಸಿ ಕೋಮುವೈಷಮ್ಯವನ್ನು ಹರಡಲು ಕೋಮುವಾದಿ ಶಕ್ತಿಗಳು ಬೀದಿಗಿಳಿದಿದ್ದು, ವಿಜಯೋತ್ಸವದ ಹೆಸರಲ್ಲಿ ಅಲ್ಲಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋಧನಕಾರಿ ಘೋಷಣೆಗಳನ್ನು ಕೂಗಲಾಗಿದೆ.
ನ್ಯಾಯದ ಪರ ನಿಲ್ಲಬೇಕಾಗಿದ್ದ ಕರಾವಳಿಯ ಕೆಲ ಶಾಸಕರು ಅಪರಾಧಿಗಳಿಗೆ ಅಭಯ ನೀಡುವ, ಅವರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆಂದು ಕರ್ನಾಟಕ ಮುಸ್ಲಿಂ ಜಮಾಅತ್ ದೂರಿದೆ. ಮುಸ್ಲಿಮರ ಮಸೀದಿ ಬಗ್ಗೆಯೂ ಅತ್ಯಂತ ಕೀಳುಮಟ್ಟದ ಮತ್ತು ಹಿಂಸೆಗೆ ಪ್ರೇರಣೆ ಕೊಡುವ ಹೇಳಿಕೆಗಳನ್ನು ಕರಾವಳಿಯ ಶಾಸಕರೊಬ್ಬರು ನೀಡಿದ್ದು ಕರಾವಳಿಯಲ್ಲಿ ಕೋಮುಗಲಭೆಯನ್ನು ಸೃಷ್ಟಿಸುವ ವ್ಯವಸ್ಥಿತ ಹುನ್ನಾರ ನಡೆಸಲಾಗುತ್ತಿದೆಯೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಅರೋಪಿಸಿದೆ.
ರಾಜ್ಯ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸೂಕ್ತ ವ್ಯವಸ್ಥೆ ಮಾಡಬೇಕು, ಕರಾವಳಿಯಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿ ಹಿಂಸೆಯನ್ನು ಪ್ರಚೋದಿಸುವವರನ್ನು ಮಟ್ಟಹಾಕಬೇಕೆಂದೂ ರಾಜ್ಯ ಸರಕಾರವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ. ವಿಚಾರಣೆಯ ನೆಪದಲ್ಲಿ ನಿರಪರಾಧಿಗಳನ್ನು, ಮಹಿಳೆಯರನ್ನು ಬೆದರಿಸುವ ಮತ್ತು ಠಾಣೆಯಲ್ಲಿ ಕೂಡಿಹಾಕುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಜಿಲ್ಲಾ ಪೋಲೀಸ್ ಇಲಾಖೆಯ ಪಕ್ಷಪಾತಿ ದೋರಣೆಯ ಬಗ್ಗೆ ತನಿಖೆ ನಡೆಸಬೇಕೆಂದು ಮುಸ್ಲಿಮ ಜಮಾಅತ್ ಆಗ್ರಹಿಸಿದೆ.ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳನ್ನು ಕರ್ನಾಟಕ ಮುಸ್ಲಿಂ ಜಮಾಅತಿನ ನಿಯೋಗ ಬೇಟಿಮಾಡಲಿದ್ದು ಕರಾವಳಿಯಲ್ಲಿ ನಡೆಯುತ್ತಿರುವ ಪ್ರಸ್ತುತ ವಿಧ್ಯಮಾನಗಳನ್ನು ಸರಕಾರದ ಗಮನಕ್ಕೆ ತರಳಿದೆಯೆಂದು ಮುಸ್ಲಿಮ ಜಮಾಅತ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ