janadhvani

Kannada Online News Paper

ಜುಲೈ 3: ಎಸ್ ಎಂ ಎ ವತಿಯಿಂದ ಮೊಹಲ್ಲಾ ಪ್ರತಿನಿಧಿ ಸಮಾವೇಶ

ವಿಟ್ಲ : ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಎಸ್ ಎಂ ಎ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜುಲೈ 3 ಬುಧವಾರ ಬೆಳಿಗ್ಗೆ 10:00ಗೆ ಜನಪ್ರಿಯ ಗಾರ್ಡನ್ ನೇರಳಕಟ್ಟೆಯಲ್ಲಿ ಸಮಾವೇಶ ಹಾಗೂ ಕರ್ವೇಲ್ ಸಾದಾತ್ ತಂಙಳ್ ಅನುಸ್ಮರಣೆ ಜರಗಲಿದೆ. ಕಾರ್ಯಕ್ರಮದಲ್ಲಿ ಎಸ್ ಎಂಎ ರಾಜ್ಯ ಅಧ್ಯಕ್ಷರಾದ ಇಸ್ಮಾಯಿಲ್ ತಂಙಳ್ ಪ್ರಾರ್ಥನೆ ನಡೆಸಲಿದ್ದು ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಯೂಸುಫ್ ಸಾಜ ವಹಿಸಲಿದ್ದಾರೆ.

ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಪ್ರಾಸ್ತಾವಿಕವಾಗಿ ರಾಜ್ಯ ಕೋಶಾಧಿಕಾರಿ ಹಾಜಿ ಹಮೀದ್ ಕೊಡುಂಗಾಯಿ ಮಾತನಾಡಲಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆಸಿ ರೋಡ್ ನಿರ್ವಹಿಸಲಿದ್ದು , ಖ್ಯಾತ ವಾಗ್ಮಿ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬು ಸುಫಿಯಾನ್ ಇಬ್ರಾಹಿಂ ಮದನಿ ವಿಷಯ ಮಂಡನೆ ನಡೆಸಲಿದ್ದಾರೆ.ರಾಜ್ಯ ಎಸ್ ಎಂ ಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಮಾನ್ ಮದನಿ, ರಾಜ್ಯ ಕಾರ್ಯದರ್ಶಿಗಳಾದ ಸಾಧಿಕ್ ಮಾಸ್ಟರ್ ,ಅಶ್ರಫ್ ಸಖಾಫಿ ಮಾಡಾವು ಹಾಗೂ ರಾಜ್ಯ ಜಿಲ್ಲಾ ಝೋನ್ ನಾಯಕರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸುಮಾರು 240 ಮೊಹಲ್ಲಾದ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಾಗಿ ಎಸ್ ಎಂ ಎ ಜಿಲ್ಲಾ ಸ್ವಾಗತ ಸಮಿತಿ ಅಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com