janadhvani

Kannada Online News Paper

ಎಸ್‌ವೈಎಸ್ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ವಾರ್ಷಿಕ ಕೌನ್ಸಿಲ್

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ಇದರ ವಾರ್ಷಿಕ ಕೌನ್ಸಿಲ್ ಸಭೆಯು ಹೋಟೆಲ್ ಹಿರಾ ಇಂಟರ್ನ್ಯಾಷನಲ್ ಪಂಪ್‌ವೆಲ್ ನಲ್ಲಿ ನಡೆಯಿತು.

ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಕಾನೆಕೆರೆ ಸಭಾಧ್ಯಕ್ಷತೆ ವಹಿಸಿದ್ದರು. ರಾಜ್ಯ ಇಸಾಬಾ ಕಾರ್ಯದರ್ಶಿ ಖಲೀಲ್ ಮಾಲಿಕಿ ಬೋಳಂತೂರು ಸಭೆಯನ್ನು ಉದ್ಘಾಟಿಸಿದರು. ಕೇರಳ ಮುಸ್ಲಿಂ ಜಮಾಅತ್ ನಾಯಕರಾದ ಸುಲೈಮಾನ್ ಮಾಸ್ಟರ್ ಕರಿವೆಳ್ಳೂರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ. ಸಿದ್ದೀಕ್ ಮೋಂಟುಗೋಳಿ, ಅಶ್‌ಅರಿಯ್ಯ ಮುಹಮ್ಮದ್ ಅಲಿ ಸಖಾಫಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ಬಶೀರ್ ಮದನಿ ಕೂಳೂರು, ಆಸಿಫ್ ಹಾಜಿ ಕೃಷ್ಣಾಪುರ, ಜಿಲ್ಲಾ ಕೋಶಾಧಿಕಾರಿ ನಝೀರ್ ಮುಡಿಪು, ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ, ದ‌ಅ್‌ವಾ ಕಾರ್ಯದರ್ಶಿ ಬದ್ರುದ್ದೀನ್ ಅಝ್ಹರಿ ಕೈಕಂಬ, ಇಸಾಬಾ ಕಾರ್ಯದರ್ಶಿ ಫಾರೂಕ್ ಶೇಡಿಗುರಿ, ಸಾಂತ್ವನ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ, ಸೋಷಿಯಲ್‌ ಕಾರ್ಯದರ್ಶಿ ಅಬ್ದುರ್ರಝಾಕ್ ಭಾರತ್ ಮಂಚಿ, ಕಲ್ಚರಲ್ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ, ಜಿಲ್ಲಾ ನಾಯಕರಾದ ಯಾಕೂಬ್ ಸ‌ಅದಿ ನಾವೂರು, ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ತೌಸೀಫ್ ಸ‌ಅದಿ ಹರೇಕಳ, ಮಜೀದ್ ಸಖಾಫಿ ಅಮ್ಮುಂಜೆ, ಕಾಸಿಂ ಲತೀಫಿ ಮಂಜನಾಡಿ, ಮುತ್ತಲಿಬ್ ವೇಣೂರು, ಅಬ್ದುಲ್ಲಾ ಕೊಳಕೆ, ಜಬ್ಬಾರ್ ಕಣ್ಣೂರು, ಹಸನ್ ಪಾಂಡೇಶ್ವರ ಹಾಗೂ ಆರು ಝೋನ್‌ಗಳಿಂದ ಆರಿಸಲ್ಪಟ್ಟ ಕೌನ್ಸಿಲರ್ ‌ಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಪ್ರಿಂಟೆಕ್ ಕೃಷ್ಣಾಪುರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

error: Content is protected !! Not allowed copy content from janadhvani.com