ಮಂಗಳೂರು: ಎಸ್ವೈಎಸ್ ರಾಜ್ಯ ಸಮಿತಿಯ ಅಧೀನದಲ್ಲಿ ಪ್ರಕೃತಿ ವಿಕೋಪ ಮುಂತಾದ ಸಂದರ್ಭದಲ್ಲಿ ತುರ್ತುಸೇವೆ ಹಾಗೂ ರಕ್ತದಾನ ಸಹಿತವಿರುವ ಸಮಾಜಸೇವೆ ಹಾಗೂ ಇನ್ನಿತರ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ರಾಜ್ಯದ 13 ಜಿಲ್ಲೆಗಳಿಂದ ಆಯ್ಕೆಯಾದ ಸುಮಾರು 2300 ಇಸಾಬಾ ಕಾರ್ಯಕರ್ತರನ್ನು ಸಮಾಜಸೇವೆಗೆ ಅರ್ಪಿಸುವ ನಿಟ್ಟಿನಲ್ಲಿ ಮಂಗಳೂರಿನ ಪುರಭವನದಲ್ಲಿ ಜುಲೈ 24 ರಂದು ನಡೆಸುವ ಇಸಾಬಾ ‘ಅಲ್-ಅರೀಶ್’ ಕ್ಯಾಂಪ್ ನಡೆಯಲಿದ್ದು, ಇದರ ಪೂರ್ವಸಿದ್ಧತಾ ಸಭೆಯು ರಾಜ್ಯ ಇಸಾಬಾ ಕಾರ್ಯದರ್ಶಿ ಖಲೀಲ್ ಮಾಲಿಕಿ ಬೋಳಂತೂರು ರವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಕಣ್ಣೂರು ಸುನ್ನೀ ಸೆಂಟರ್ ನಲ್ಲಿ ನಡೆಯಿತು.
ಎಸ್ವೈಎಸ್ ರಾಜ್ಯ ನಾಯಕ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ್ಯ ಸಭೆಯನ್ನು ಉದ್ಘಾಟಿಸಿದರು.ಹಾಫಿಳ್ ಯಾಕೂಬ್ ಸಅದಿ ನಾವೂರು ವಿಷಯ ಮಂಡಿಸಿದರು. ಈ ಸಂದರ್ಭದಲ್ಲಿ ಎಸ್ ವೈ ಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ, ದಅ್ವಾ ಕಾರ್ಯದರ್ಶಿ ಬದ್ರುದ್ದೀನ್ ಅಝ್ಹರಿ ಕೈಕಂಬ, ಜಿಲ್ಲಾ ನಾಯಕರಾದ ಮಹ್ಮೂದ್ ಸಅದಿ ಕುಕ್ಕಾಜೆ, ಖಾಸಿಂ ಲತೀಫಿ ಮಂಜನಾಡಿ
ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ಹಸನ್ ಪಾಂಡೇಶ್ವರ, ಇಸ್ಹಾಕ್ ತಂಙಳ್ ಕಣ್ಣೂರು,ಝೋನ್ ಅಧ್ಯಕ್ಷ ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್ಪದವು, ಪ್ರಧಾನ ಕಾರ್ಯದರ್ಶಿ ನಝೀರ್ ವಳವೂರು, ಎಸ್ ಎಸ್ ಎಸ್ ಎಫ್ ಮಂಗಳೂರು ಸೆಕ್ಟರ್ ಅಧ್ಯಕ್ಷ ತನ್ವೀರ್ ಸಖಾಫಿ ಕಣ್ಣೂರು ಅಖೀಲ್ ಬಜಾಲ್, ಮನ್ಸೂರ್ ಬಜಾಲ್, ನೌಶೀರ್ ಫೈಝಲ್ ನಗರ ಮುಂತಾದ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ