ಬೆಂಗಳೂರು – ಎಸ್.ಎಸ್.ಎಫ್ ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿದ ಕ್ಯಾಡ್ರೆ ಲೀಡರ್ಸ್ ಟ್ರೈನಿಂಗ್ ಕ್ಯಾಂಪ್ (ನಾಯಕರಿಗೆ ತರಬೇತಿ ಶಿಬಿರ )ಕಾರ್ಯಕ್ರಮವು ರಾಜ್ಯಧ್ಯಕ್ಷರಾದ ಸುಫಿಯಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಗುಲಿಸ್ತಾನ್ ಶಾದಿ ಮಹಲ್ ಶಿವಾಜಿನಗರದಲ್ಲಿ ನಡೆಯಿತು.ಸಯ್ಯದ್ ಮುಹಮ್ಮದ್ ಸಹಲ್ ಅಲ್ ಹೈದ್ರೋಸಿ ತಂಗಳರು ದುಆ ದೊಂದಿಗೆ ಸಭೆಗೆ ಚಾಲನೆ ನೀಡಿದರು.ಕೇರಳ ರಾಜ್ಯ ಎಸ್ಸೆಸ್ಸೆಫ್ ದಅವಾ ಕಾರ್ಯದರ್ಶಿ ಅನಸ್ ಅಮಾನಿ ಪುಷ್ಪಗಿರಿ ತರಗತಿಯನ್ನು ನಡೆಸಿಕೊಟ್ಟು , ಸಂಘಟನಾ ಕಾರ್ಯಾಚರಣೆಯಲ್ಲಿ ವೈಯಕ್ತಿಕತೆಯನ್ನು ಬಿಟ್ಟು ಅರ್ಪಣಾ ಮನೋಭಾವದೊಂದಿಗೆ ಕಾರ್ಯಾಚರಿಸುವುದರ ಮೂಲಕ ಸಮಾಜದಲ್ಲಿ ಒಳಿತನ್ನು ಪಸರಿಸುವಲ್ಲಿ ನಾವು ಮುಂದಾಳುಗಳಾಗಬೇಕೆಂದು ಸಲಹೆ ನೀಡಿದರು.ಮೈಸೂರಿನಲ್ಲಿ ನಡೆಯುವ ಕ್ಯಾಂಪಸ್ ವಿದ್ಯಾರ್ಥಿಗಳ ಕ್ಯಾಂಪಸ್ ಕಾನ್ಫೆರನ್ಸ್ ನ ಬಗ್ಗೆ ಮಾಹಿತಿ ನೀಡಿ, ಕಾರ್ಯಕ್ರಮದ ಯಶಸ್ವಿಗೆ ಸರ್ವರೂ ಸಹಕರಿಸಬೇಕೆಂದು ರಾಜ್ಯಾಧ್ಯಕ್ಷರು ಕರೆ ನೀಡಿದರು.
ರಾಜ್ಯ ನಾಯಕರಾದ ಮುಸ್ತಾಫಾ ನಈಮಿಯವರ ಭಾಷಣದಲ್ಲಿ ಕ್ಯಾಡ್ರೆ ಕ್ಯಾಂಪ್ ನ ಮಹತ್ವವನ್ನು ವಿವರಿಸಿದರು.
ರಾಜ್ಯ ಸಮಿತಿ ಸಂಘಟನಾ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಲು 5 ಫ್ಲಾಟ್ ಪಾರಂಗಳನ್ನು ಸಿದ್ದಪಡಿಸಿದ್ದು ಅದರಲ್ಲಿ ಬೆಂಗಳೂರು ಕೇಂದ್ರೀಕೃತ *ತವಕ್ಕಲ್ ಫ್ಲಾಟ್ ಪಾರಂ* ನ ಪೋಸ್ಟರ ನ್ನು ಕ್ಯಾಂಪ್ ನಲ್ಲಿ ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಬೆಂಗಳೂರು,ಕೊಡಗು ಜಿಲ್ಲೆ ಯಿಂದ ಆಯ್ದ ಸುಮಾರು 250 ಕ್ಕೂ ಹೆಚ್ಚು ಎಸ್ ಎಸ್ ಎಫ್ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು ಜಿಲ್ಲಾ ಎಸ್ ಎಸ್ ಎಫ್ ಪ್ರಧಾನ ಕಾರ್ಯದರ್ಶಿ ಶಬೀಬ್ ಸ್ವಾಗತಿಸಿ ಜಿಲ್ಲಾ ಕ್ಯೂಡಿ ಕಾರ್ಯದರ್ಶಿ ಫಾರೂಕ್ ಅಮಾನಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ