ಪುತ್ತೂರು: ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದೊಳಗೆ ಹರಿತವಾದ ಚೂರಿಯಿಂದ ವಿದ್ಯಾರ್ಥಿನಿಗೆ, ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬನು ಇರಿದ ಘಟನೆ ನಡೆದಿದ್ದು ಇದನ್ನು ಪುತ್ತೂರು ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ತೀವ್ರವಾಗಿ ಖಂಡಿಸಿದೆ.
ಆರೋಪಿಯನ್ನು ಕೂಡಲೇ ಬಂಧಿಸಿ ಮಾದರಿ ಯೋಗ್ಯವಾದ ರೀತಿಯಲ್ಲಿ ಶಿಕ್ಷೆ ಕೊಡಬೇಕೆಂದು ಸಮಿತಿಯು ಆಗ್ರಹಿಸಿದೆ.
ಶಿಕ್ಷಣ ಸಂಸ್ಥೆ ಯೊಳಗೆ ಆಯುಧ ತರುವುದು ಅಕ್ಷಮ್ಯ ಅಪರಾಧ, ಇದರ ಹಿಂದಿನ ಷಡ್ಯಂತ್ರ ಗಳನ್ನು ಬಯಲಿಗೆ ತರಬೇಕು.
ಘಟನೆಯನ್ನು ಶಿಕ್ಷಕಿಯೋರ್ವರು ಮರೆಮಾಚಲು ಪ್ರಯತ್ನಿಸಿದ್ದು ಕೂಡ ತನಿಖೆಯಾಗಬೇಕು . ಪೋಲೀಸ್ ಇಲಾಖೆಯು ಈ ಕೂಡಲೇ ಎಚ್ಚೆತ್ತು ಕಾರ್ಯ ಪ್ರವೃತ್ತರಾಗಬೇಕೆಂದು ಸಂಯುಕ್ತ ಜಮಾಅತ್ ಅಧ್ಯಕ್ಷ ಡಾ. ಎಮ್ಮೆಸ್ಸೆಂ. ಝೖನೀ ಕಾಮಿಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ, ಕೋಶಾಧಿಕಾರಿ ಯೂಸುಫ್ ಗೌಸಿಯ ಸಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ