ಮನಾಮ: ಬಹರೈನ್ ಸುನ್ನೀ ಕನ್ನಡಿಗರ ಆವೇಶ ಕೆ.ಸಿ.ಎಫ್, ವರ್ಷಂಪ್ರತಿ ನಡೆಸುವ ಬೃಹತ್ ಇಫ್ತಾರ್ ಸಂಗಮವು ದಿನಾಂಕ 1-6-2018ರಂದು ಸಂಜೆ 5 ಗಂಟೆಗೆ ಬಹರೈನ್ ಮನಾಮದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.ಇದು ಕೇವಲ ಇಫ್ತಾರ್ ಕಾರ್ಯಕ್ರಮ ಮಾತ್ರವಾಗಿರದೆ, ಬಹರೈನಿನ ಅಷ್ಟ ದಿಕ್ಕುಗಳಿಂದಲೂ ಆಗಮಿಸಿದ ಅನಿವಾಸಿ ಕನ್ನಡಿಗರ ಸಂಗಮವೂ ಆಗಿತ್ತು.
ಕೆಸಿಎಫ್ ಬಹರೈನ್ ನ ಬೃಹತ್ ಇಫ್ತಾರ್ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣವನ್ನು ಕೆ.ಸಿ.ಎಫ್ ಅಂತರ್ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷರೂ, ಕರ್ನಾಟಕ ಎಸ್. ವೈ.ಎಸ್ ಪ್ರಧಾನ ಕಾರ್ಯದರ್ಶಿ, ಭಾಷಣ ರತ್ನ ಎಂ.ಎಸ್.ಎಂ ಝೈನಿ ಕಾಮಿಲ್ ಸಖಾಫಿ ಉಸ್ತಾದರು ನೆರವೇರಿಸಿದರು. ವಿಶೇಷ ಅತಿಥಿಯಾಗಿ ಪ್ಯಾಲೆಸ್ತೀನ್ ರಾಯಭಾರಿ ಸನ್ಮಾನ್ಯ ತ್ವಾಹ ಎಂ.ಅಬ್ದುಲ್ ಖಾದರ್ ಹಾಗೂ ಎನ್ಆರ್ ಐಕೆ ಬಹರೈನ್ ಇದರ ಚೇರ್ಮನ್ ಲೀಲಾಧರ್ ಬೈಕಂಪಾಡಿ ರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಕನ್ನಡ ಸಂಘ ಬಹರೈನ್ ಮಾಜಿ ಅಧ್ಯಕ್ಷರಾದ ರಾಜ್ ಕುಮಾರ್,ದಕ್ಷಿಣ ಕನ್ನಡ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಮೆಟೆಲ್ಕೊ ರಝಾಕ್ ಹಾಜಿ ,ರಶೀದ್ ರೆಮಿ ಅಲ್ಲದೆ ಹಲವಾರು ಉಲಮಾಗಳು, ಸಾಮಾಜಿಕ ನೇತಾರರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಕೆ.ಸಿ.ಎಫ್ ಐಎನ್ಸಿ, ರಾಷ್ಟ್ರೀಯ, ಝೋನಲ್ ಹಾಗೂ ಸೆಕ್ಟರ್ ನೇತಾರರೂ ಹಾಗೂ ಕಾರ್ಯಕರ್ತ ರರು ಬಾಗವಿಸಿದ್ದರು.ಅಲ್ಲದೆ ಬಹರೈನ್ ವಿವಿಧ ಅನಿವಾಸಿ ಸಂಘಟನೆಗಳ ನೇತಾರರು, ಸದಸ್ಯರು ಗಳು ಪಾಲ್ಗೊಂಡಿದ್ದರು.ಕಾರ್ಯಕ್ರಮದ ಆರಂಭದಲ್ಲಿ ಮಜೀದ್ ಸಅದಿ ಉಸ್ತಾದರವರ ದುಃಅ ನೆರವೇರಿಸಿ,ಕೆಸಿಎಫ್ ರಾಷ್ಟ್ರೀಯ ಸಮಿತಿ ಆಡಳಿತ ವಿಭಾಗದ ಚೇರ್ಮನ್ ಬಶೀರ್ ಕಾರ್ಲೆ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಸ್ವಾಗತವನ್ನು ಕೋರಿ, ಕಾರ್ಯಕ್ರಮದ ನಿರೂಪಣೆಯನ್ನು ನೆರವೇರಿಸಿದರು. ಕಾರ್ಯಕ್ರಮ ವನ್ನು ಅಝ್ಹರ್ ತಂಙಳ್ ರವರ ದುಃಅ ಮತ್ತು ಬುರ್ದಾ ಆಲಾಪನೆಯೊಂದಿಗೆ ಕೊನೆಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ